ಎಂ.ಎಸ್ ಧೋನಿ 
ಕ್ರೀಡೆ

ದೇವರಿಗೆ ಅವಮಾನ ಧೋನಿಗೆ ಸಮನ್ಸ್

ಹಿಂದೂ ದೇವರಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಭಾರತ ಕ್ರಿಕೆಟ್ ತಂಡದ ನಾಯಕ ಎಂ.ಎಸ್ ಧೋನಿ...

ಬೆಂಗಳೂರು: ಹಿಂದೂ ದೇವರಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಭಾರತ ಕ್ರಿಕೆಟ್ ತಂಡದ ನಾಯಕ ಎಂ.ಎಸ್ ಧೋನಿ ಹಾಗೂ ಇತರ ನಾಲ್ವರಿಗೆ 9ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮೇ 8ರಂದು ಖುದ್ದು ಹಾಜರಾಗುವಂತೆ ಆದೇಶಿಸಿದೆ.

ಪ್ರತಿಷ್ಠಿತ ವಾರಪತ್ರಿಕೆಯೊಂದು ಧೋನಿ ಅವರನ್ನು ವಿಷ್ಣುವಿನಂತೆ ಚಿತ್ರಿಸಿತ್ತು. ಎಂಟು ಕೈಗಳಲ್ಲಿ ವಿವಿಧ ವಸ್ತುಗಳಿದ್ದು, ಒಂದು ಕೈಯಲ್ಲಿ ಶೂ ಇತ್ತು. ಈ ಮೂಲಕ ಧೋನಿ ಹಾಗೂ ವಾರಪತ್ರಿಕೆ ಸಂಪಾದಕರು ಸೇರಿ ಐವರು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ವಕೀಲ ಧರ್ಮಪಾಲ್ ಎಂಬುವರು 2009ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು. ಶನಿವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಧೋನಿ ಸೇರಿದಂತೆ ಐಳರಿಗೆ ಮೇ 8ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ವಕೀಲ ಧರ್ಮಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT