1983ರ ಚಾಂಪಿಯನ್ ಭಾರತ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

1983ರಲ್ಲಿ ಹೊಸ ಇತಿಹಾಸ ಬರೆದ ಭಾರತ

ಆರಂಭಿಕ ಎರಡು ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಪ್ರಾಬಲ್ಯ ನೋಡಿದ್ದ ಕ್ರಿಕೆಟ್ ಜಗತ್ತಿಗೆ, ಮೂರನೇ ಆವೃತ್ತಿಯಲ್ಲಿ ದೊಡ್ಡ ಅಚ್ಚರಿ ಎದುರಾಗಿತ್ತು.

ಆರಂಭಿಕ ಎರಡು ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಪ್ರಾಬಲ್ಯ ನೋಡಿದ್ದ ಕ್ರಿಕೆಟ್ ಜಗತ್ತಿಗೆ, ಮೂರನೇ ಆವೃತ್ತಿಯಲ್ಲಿ ದೊಡ್ಡ ಅಚ್ಚರಿ ಎದುರಾಗಿತ್ತು.

ಕಾರಣ ಕ್ರಿಕೆಟ್‌ನಲ್ಲಿ ಆಗಷ್ಟೇ ಬೆಳವಣಿಗೆ ಕಾಣುತ್ತಿದ್ದ ಭಾರತ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿತ್ತು.

ಆ ಕ್ಷಣದ ನಂತರ ಭಾರತದಲ್ಲಿ ಕ್ರಿಕೆಟ್ ಕ್ರೀಡೆ ಬೆಳೆದ ರೀತಿ ಅದ್ಭುತ. ಭಾರತದಲ್ಲಿ ಕ್ರಿಕೆಟ್ ಈಗ ಧರ್ಮವಾಗಿ ಪರಿವರ್ತನೆಯಾಗುವಲ್ಲಿ 1983ರ ವಿಶ್ವಕಪ್ ಗೆಲುವು ಸಹ ಪ್ರಮುಖ ಕಾರಣಗಳಲ್ಲಿ ಒಂದು ಎಂದರೆ ತಪ್ಪಿಲ್ಲ.

ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಿದ್ದರೂ, ಜಿಂಬಾಬ್ವೆ ಹಾಗೂ ಭಾರತದಂತಹ ದುರ್ಬಲ ತಂಡಗಳು ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್‌ನಂತಹ ಪ್ರಬಲ ತಂಡಗಳ ವಿರುದ್ಧ ಅದ್ಭುತ ಗೆಲುವ ದಾಖಲಿಸಿ, ಹೊಸ ಸಂಚಲನ ಸೃಷ್ಟಿಸಿದ್ದವು. ಈ ಟೂರ್ನಿಯಲ್ಲಿ ದುರ್ಬಲ ತಂಡಗಳು ಘಟಾನುಘಟಿಗಳಿಗೆ ಮಣ್ಣು ಮುಕ್ಕಿಸಿದ ರೀತಿ ವಿಶ್ವದಲ್ಲಿನ ಕ್ರಿಕೆಟ್ ಆಭಿಮಾನಿಗಳ ಕುತೂಹಲವನ್ನು ಕೆರಳಿಸಿತ್ತು.

ಈ ಟೂರ್ನಿಯಲ್ಲಿ ಶ್ರೀಲಂಕಾ ಸೇರಿದಂತೆ 7 ತಂಡಗಳು ಟೆಸ್ಟ್ ಮಾನ್ಯತೆ ಪಡೆದ ತಂಡಗಳಾಗಿದ್ದವು. ಜಿಂಬಾಬ್ವೆ ಅರ್ಹತೆ ಪಡೆಯುವ ಮೂಲಕ ಟೂರ್ನಿಗೆ ಪ್ರವೇಶಿಸಿತ್ತು. ಈ ಟೂರ್ನಿಯಲ್ಲೂ 60 ಓವರ್ ಪಂದ್ಯಗಳು ನಡೆದಿದ್ದು, 8 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿತ್ತು.

ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಉಪಾಂತ್ಯದ ಸುತ್ತಿಗೆ ಪ್ರವೇಶಿಸಿದ್ದವು. ಈ ಟೂರ್ನಿಯಲ್ಲಿ ಕರ್ನಾಟಕದ ರೋಜರ್ ಬಿನ್ನಿ 18 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಇನ್ನು ಇಂಗ್ಲೆಂಡ್‌ನ ಡೇವಿಡ್ ಗೋವರ್ (348) ಅತಿ ಹೆಚ್ಚು ರನ್ ದಾಖಲಿಸಿದ ಆಟಗಾರನಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT