ಮುಂಬೈ ರಣಜಿ ಕ್ರಿಕೆಟಿಗ ಹಿಕೆನ್ ಶಾ 
ಕ್ರೀಡೆ

ಐಪಿಎಲ್ ಲಂಚ: ಮುಂಬೈ ಆಟಗಾರ ಹಿಕೆನ್ ಶಾ ಅಮಾನತು ಮಾಡಿದ ಬಿಸಿಸಿಐ

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮುಂಬೈ ರಣಜಿ ಕ್ರಿಕೆಟಿಗ ಹಿಕೆನ್ ಶಾ ಅವರನ್ನು ಬಿಸಿಸಿಐ ಸೋಮವಾರ ಅಮಾನತು ಮಾಡಿದೆ....

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ನಡೆದ ಲಂಚ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮುಂಬೈ ರಣಜಿ ಕ್ರಿಕೆಟಿಗ ಹಿಕೆನ್ ಶಾ ಅವರನ್ನು ಬಿಸಿಸಿಐ ಸೋಮವಾರ ಅಮಾನತು ಮಾಡಿದೆ.

ಹಿಕೆನ್ ಶಾ ಅವರು ಐಪಿಎಲ್ ನಲ್ಲಿ ರಾಜಸ್ತಾನ ರಾಯಲ್ಸ್ ತಂಡದ ಆಟಗಾರರೊಬ್ಬರಿಗೆ  ಲಂಚ ಆಮಿಷವೊಡ್ಡಿದ ಆರೋಪ ಎದುರಿಸುತಿದ್ದರು.ಪ್ರಕರಣ ಸಂಬಂಧ ಇಂದು ನಡೆದ ವಿಚಾರಣೆ ವೇಳೆ ಹಿಕೆನ್ ಶಾ ವಿರುದ್ಧದ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಬಿಸಿಸಿಐ ಶಾ ಅವರನ್ನು ಅಮಾನತು ಮಾಡಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತಂತೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು, ವಿಚಾರಣೆ ವೇಳೆ ಹಿಕೆನ್ ಶಾ ಭ್ರಷ್ಟಾಚಾರ ವಿರೋಧಿ ನೀತಿಗೆ ವಿರುದ್ಧವಾಗಿ ನಡೆದುಕೊಂಡಿರುವುದು ಸಾಬೀತಾಗಿದೆ. ಹಾಗಾಗಿ ಶಿಸ್ತು ಸಮಿತಿ ಸೂಕ್ತ ಆದೇಶ ನೀಡುವವರೆಗೂ ಹಿಕೆನ್ ಶಾ ಅವರನ್ನು ಬಿಸಿಸಿಐಗೆ ಸಂಬಂಧಪಟ್ಟ ಎಲ್ಲ ಪಂದ್ಯಗಳಿಂದಲೂ ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT