ಸಚಿನ್ ತೆಂಡೂಲ್ಕರ್ 
ಕ್ರೀಡೆ

ವಿಂಬಲ್ಡನ್ ಸಾಧಕರಿಗೆ ಸಚಿನ್ ಅಭಿನಂದನೆ

ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಪ್ರಶಸ್ತಿ ತಂದು ಕೊಟ್ಟ ಭಾರತದ ಟೆನಿಸ್ ತಾರೆಗಳಾದ ಲಿಯಾಂಡರ್ ಪೇಸ್, ಸಾನಿಯಾ ಮಿರ್ಜಾ ಹಾಗೂ ...

ಲಂಡನ್ : ವಿಂಬಲ್ಡನ್ ಟೆನಿಸ್  ಟೂರ್ನಿಯಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಪ್ರಶಸ್ತಿ ತಂದು ಕೊಟ್ಟ ಭಾರತದ ಟೆನಿಸ್ ತಾರೆಗಳಾದ ಲಿಯಾಂಡರ್  ಪೇಸ್, ಸಾನಿಯಾ ಮಿರ್ಜಾ ಹಾಗೂ ಯುವ  ಆಟಗಾರ ಸುಮಿತ್ ನಗಾಲ್ ಅವರಿಗೆ ಕ್ರಿಕೆಟ್ ದಿಗ್ಜಜ ಸಚಿನ್ ತೆಂಡೂಲ್ಕರ್ ಅಭಿನಂದನೆ ಸಲ್ಲಿಸಿದ್ದಾರೆ. 17 ವರ್ಷದ ದೆಹಲಿ ಆಟಗಾರ ಸುಮಿತ್ ನಗಾಲ್ ಬಾಲಕರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಗ್ರಾಂಡ್‍ಸ್ಲಾಮ್ ಟೂರ್ನಿಯ ಕಿರಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಆರನೇ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದರು.

``ಲಿಯಾಂಡರ್ ಪೇಸ್ ಮತ್ತು ಮಾರ್ಟಿನಾ ಹಿಂಗಿಸ್ ಮತ್ತೊಂದು ಗ್ರಾಂಡ್‍ಸ್ಲಾಮ್ ಪ್ರಶಸ್ತಿ ಗೆದ್ದಿದ್ದಕ್ಕೆ ಅಭಿನಂದನೆಗಳು. ನೀವು ಯುವ ಆಟಗಾರರಿಗೆ ಅತ್ಯದ್ಭುತ ಸ್ಫೂರ್ತಿಯಾಗಿದ್ದೀರಿ'' ಎಂದು ಪೇಸ್ ಗೆಲುವಿಗೆ ಸಚಿನ್ ತೆಂಡೂಲ್ಕರ್ ತಮ್ಮ ಟ್ವಿಟರ್‍ನಲ್ಲಿ ಅಭಿನಂದಿಸಿದ್ದಾರೆ.

 ``ವಿಂಬಲ್ಡನ್ 2015ರಲ್ಲಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗಿಸ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಟ್ರೋಫಿಗಳು ನಿಮ್ಮದಾಗಲಿ. ನಾವೆಲ್ಲ ಹೆಮ್ಮೆಪಡುವಂತೆ ಮಾಡಿದ್ದೀರಿ. ನಿಮಗೆ ಅಭಿನಂದನೆಗಳು'' ಎಂದು ಸಚಿನ್ ಸಾನಿಯಾ ಗೆಲುವಿಗೂ ಸಂತಸ ವ್ಯಕ್ತಪಡಿಸಿದ್ದಾರೆ.

 ``ವಿಂಬಲ್ಡನ್ ಬಾಲಕರ ಡಬಲ್ಸ್ ಪ್ರಶಸ್ತಿ ಗೆದ್ದ ಸುಮಿತ್ ನಗಾಲ್‍ಗೆ ಅಭಿನಂದನೆಗಳು. ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಸಾಕಷ್ಟು ಶ್ರಮ ಹಾಕಿ ನಿಮ್ಮ ಕನಸನ್ನು ನನಸಾಗಿಸಿ'' ಎಂದು ಸಚಿನ್ ಯುವ ಆಟಗಾರ ನಿಗೂ ಸಚಿನ್ ಶುಭೈ ಹಾರೈಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT