ರಾಜ್ ಕುಂದ್ರಾ 
ಕ್ರೀಡೆ

ಸಾಕ್ಷ್ಯಾಧಾರ ಇಲ್ಲದಿದ್ದರೂ ಅಪರಾಧಿ ಎಂದು ತೀರ್ಪು ನೀಡಲಾಗಿದೆ: ರಾಜ್ ಕುಂದ್ರಾ

ಕ್ರಿಕೆಟ್ ನಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ರಾಜ್ ಕುಂದ್ರಾ ತಾವು ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನವದೆಹಲಿ: ಐಪಿಎಲ್ ನಲ್ಲಿ ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ನಡೆಸಿದ ಆರೋಪ ಸಾಬಿತಾಗಿ ಕ್ರಿಕೆಟ್ ನಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ರಾಜ್ ಕುಂದ್ರಾ ತಾವು ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನನ್ನ ವಿರುದ್ಧ ಸಾಕ್ಷಿ ಇಲ್ಲದೇ ಇದ್ದರೂ ಅಪರಾಧಿ ಎಂದು ತೀರ್ಪು ನೀಡಲಾಗಿದೆ ಎಂದು ರಾಜ್ ಕುಂದ್ರಾ ಹೇಳಿದ್ದಾರೆ. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾ.ಲೋಧಾ ಸಮಿತಿ ನೀಡಿರುವ  ಅಂತಿಮ ವರದಿಯ ಪ್ರತಿ ಇನ್ನೂ ತಮಗೆ ತಲುಪಿಲ್ಲ. ದೆಹಲಿ ಪೊಲೀಸರಾಗಲಿ ರಾಜಸ್ಥಾನದ ಪೊಲೀಸರಾಗಲಿ ತಮ್ಮ ವಿರುದ್ಧ ಕ್ರಮ ಕೈಗೊಳ್ಳಬಹುದಾದ ಅಪರಾಧವನ್ನು ಗುರುತಿಸಿಲ್ಲ ಎಂದು ರಾಜ್ ಕುಂದ್ರಾ ಹೇಳಿದ್ದಾರೆ.

ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ನನ್ನ ವಿರುದ್ಧ ಅಪರಾಧ ಸಾಬೀತಾಗಿರುವುದು ನನ್ನ ಪ್ರಾಮಾಣಿಕತೆಗೆ ಪ್ರಶ್ನಾರ್ಹವಾಗಿದೆ. ನನ್ನ ವಿರುದ್ಧ ಸಾಕ್ಷ್ಯಾಧಾರಗಳಿಲ್ಲದೆ ಇದ್ದರೂ ತನಿಖಾ ತಂಡಕ್ಕೆ ನಾನು ನೀಡಿದ ಸಹಕಾರ ಈಗ ನನಗೇ ಮುಳುವಾಗಿದೆ ಎಂದು ರಾಜ್ ಕುಂದ್ರಾ ತಾವು ನಿರಪರಾಧಿ ಎಂದು ಸಮರ್ಥಿಸಿಕೊಂಡಿದ್ದಾರೆ.

 2013ರ ಐಪಿಎಲ್ ಸೀಸನ್ 6ರ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತೀರ್ಪು ಪ್ರಕಟಿಸಿದ್ದ ತನಿಖಾ ಸಮಿತಿ,  ಚೆನ್ನೈ ಸೂಪರ್ ಕಿಂಗ್ ತಂಡದ ಮ್ಯಾನೇಜರ್ ಗುರುನಾಥ್ ಮೇಯಪ್ಪನ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಸಹ ಮಾಲೀಕ ರಾಜ್ ಕುಂದ್ರಾ ಇಬ್ಬರಿಗೂ  ಕ್ರಿಕೆಟ್ ನಿಂದ ಅಜೀವ ನಿಷೇಧ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT