ರಾಜ್ ಕುಂದ್ರಾ 
ಕ್ರೀಡೆ

ಸಾಕ್ಷ್ಯಾಧಾರ ಇಲ್ಲದಿದ್ದರೂ ಅಪರಾಧಿ ಎಂದು ತೀರ್ಪು ನೀಡಲಾಗಿದೆ: ರಾಜ್ ಕುಂದ್ರಾ

ಕ್ರಿಕೆಟ್ ನಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ರಾಜ್ ಕುಂದ್ರಾ ತಾವು ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನವದೆಹಲಿ: ಐಪಿಎಲ್ ನಲ್ಲಿ ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ನಡೆಸಿದ ಆರೋಪ ಸಾಬಿತಾಗಿ ಕ್ರಿಕೆಟ್ ನಿಂದ ಆಜೀವ ನಿಷೇಧಕ್ಕೆ ಒಳಗಾಗಿರುವ ರಾಜ್ ಕುಂದ್ರಾ ತಾವು ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನನ್ನ ವಿರುದ್ಧ ಸಾಕ್ಷಿ ಇಲ್ಲದೇ ಇದ್ದರೂ ಅಪರಾಧಿ ಎಂದು ತೀರ್ಪು ನೀಡಲಾಗಿದೆ ಎಂದು ರಾಜ್ ಕುಂದ್ರಾ ಹೇಳಿದ್ದಾರೆ. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾ.ಲೋಧಾ ಸಮಿತಿ ನೀಡಿರುವ  ಅಂತಿಮ ವರದಿಯ ಪ್ರತಿ ಇನ್ನೂ ತಮಗೆ ತಲುಪಿಲ್ಲ. ದೆಹಲಿ ಪೊಲೀಸರಾಗಲಿ ರಾಜಸ್ಥಾನದ ಪೊಲೀಸರಾಗಲಿ ತಮ್ಮ ವಿರುದ್ಧ ಕ್ರಮ ಕೈಗೊಳ್ಳಬಹುದಾದ ಅಪರಾಧವನ್ನು ಗುರುತಿಸಿಲ್ಲ ಎಂದು ರಾಜ್ ಕುಂದ್ರಾ ಹೇಳಿದ್ದಾರೆ.

ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ನನ್ನ ವಿರುದ್ಧ ಅಪರಾಧ ಸಾಬೀತಾಗಿರುವುದು ನನ್ನ ಪ್ರಾಮಾಣಿಕತೆಗೆ ಪ್ರಶ್ನಾರ್ಹವಾಗಿದೆ. ನನ್ನ ವಿರುದ್ಧ ಸಾಕ್ಷ್ಯಾಧಾರಗಳಿಲ್ಲದೆ ಇದ್ದರೂ ತನಿಖಾ ತಂಡಕ್ಕೆ ನಾನು ನೀಡಿದ ಸಹಕಾರ ಈಗ ನನಗೇ ಮುಳುವಾಗಿದೆ ಎಂದು ರಾಜ್ ಕುಂದ್ರಾ ತಾವು ನಿರಪರಾಧಿ ಎಂದು ಸಮರ್ಥಿಸಿಕೊಂಡಿದ್ದಾರೆ.

 2013ರ ಐಪಿಎಲ್ ಸೀಸನ್ 6ರ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತೀರ್ಪು ಪ್ರಕಟಿಸಿದ್ದ ತನಿಖಾ ಸಮಿತಿ,  ಚೆನ್ನೈ ಸೂಪರ್ ಕಿಂಗ್ ತಂಡದ ಮ್ಯಾನೇಜರ್ ಗುರುನಾಥ್ ಮೇಯಪ್ಪನ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಸಹ ಮಾಲೀಕ ರಾಜ್ ಕುಂದ್ರಾ ಇಬ್ಬರಿಗೂ  ಕ್ರಿಕೆಟ್ ನಿಂದ ಅಜೀವ ನಿಷೇಧ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ?, ಕೊಲಂಬೋದಲ್ಲಿ ಶೇ.94ರಷ್ಟು ವರ್ಷಧಾರೆ ಸಾಧ್ಯತೆ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ

ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಕೇಂದ್ರ ಕಳವಳ!

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್‌ಗೆ ತಲೆನೋವಾದ ಆಯ್ಕೆ!

T20 World Cup 2026: 'ಭಾರತ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ'; IND vs PAK ಪಂದ್ಯಕ್ಕೂ ಮುನ್ನ ಪಾಕ್ ಮಾಜಿ ಕ್ರಿಕೆಟಿಗ ಹೇಳಿಕೆ

SCROLL FOR NEXT