ಬಿಸಿಸಿಐ(ಸಂಗ್ರಹ ಚಿತ್ರ) 
ಕ್ರೀಡೆ

ಐಪಿಎಲ್ ಕಗ್ಗಂಟು: ಸಮಿತಿ ರಚನೆಗೆ ಬಿಸಿಸಿ ನಿರ್ಧಾರ

ಐಪಿಎಲ್ ಟೂರ್ನಿಗೆ ಸಂಬಂಧಿಸಿದಂತೆ ಮುಂದೆ ಕೈಗೊಳ್ಳಬಹುದಾದ ನಿರ್ಧಾರಗಳ ಬಗ್ಗೆ ಸಲಹೆಗಳನ್ನು ನೀಡಲು ಹೊಸ ಸಮಿತಿಯೊಂದನ್ನು ರಚಿಸುವುದಾಗಿ ಬಿಸಿಸಿಐ ಹೇಳಿದೆ.

ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ಎಂ ಲೋಧಾ ನೇತೃತ್ವದ ಸಮಿತಿ ನೀಡಿದ್ದ ಆದೇಶನವನ್ನು ಪರಿಶೀಲಿಸಲು ಹಾಗೂ ಐಪಿಎಲ್ ಟೂರ್ನಿಗೆ ಸಂಬಂಧಿಸಿದಂತೆ ಮುಂದೆ ಕೈಗೊಳ್ಳಬಹುದಾದ ನಿರ್ಧಾರಗಳ ಬಗ್ಗೆ ಸಲಹೆಗಳನ್ನು ನೀಡಲು ಹೊಸ ಸಮಿತಿಯೊಂದನ್ನು ರಚಿಸುವುದಾಗಿ ಬಿಸಿಸಿಐ ಹೇಳಿದೆ.

ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಆರ್.ಎಂ ಲೋಧಾ, ಐಪಿಎಲ್ ಪ್ರಾಂಚೈಸಿ ಗಳಾದ ಚೆನ್ನೈ ಸೂಪರ್ ಕಿಂಗ್ಸ್(ಸಿ.ಎಸ್.ಕೆ) ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳನ್ನು 2 ವರ್ಷಗಳವರೆಗೆ ಐಪಿಎಲ್ ನಿಂದ ನಿಷೇಧಿಸಿ ಆದೇಶ ನೀಡಿದರು. ಈ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಡಳಿತ ಮಂಡಳಿಯ ಸಭೆ ಕರೆಯಲಾಗಿತ್ತು. ಆದರೆ ಸಭೆಯಲ್ಲಿ ತಂಡಗಳ ನಿಷೇಧದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿರಲಿಲ್ಲ.

ಬದಲಿಗೆ ಐವರು ಸದಸ್ಯರುಳ್ಳ ಸಮಿತಿಯನ್ನು ನೇಮಿಸಲು ನಿರ್ಧರಿಸಲಾಗಿದೆ. ನ್ಯಾ. ಲೋಧಾ ಆದೇಶವನ್ನು ಅಧ್ಯಯನ ಮಾಡಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲಹೆಗಳನ್ನು ನೀಡುವ ಜವಾಬ್ದಾರಿ ಈ ಸಮಿತಿಗೆ ನೀಡಲಾಗಿದೆ. ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಗೈರು ಹಾಜರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಐಪಿಎಲ್ ಆಯುಕ್ತ ರಾಜೀವ್ ಶುಕ್ಲಾ ಅಜಯ್ ಶಿರ್ಕೆ, ಟೀಂ ಇಂಡಿಯಾ ಮುಖ್ಯ ತರಬೇತುದಾರ ಹಾಗೂ ನಿರ್ದೇಶಕ ರವಿಶಾಸ್ತ್ರಿ ಹಾಗೂ ಜೋತಿರಾದಿತ್ಯ ಸಿಂಧಿಯಾ, ಐಪಿಎಲ್ ಆಡಳಿತ ಮಂಡಳಿ ಸದಸ್ಯ ಸೌರವ್ ಗಂಗೂಲಿ ಮುಂತಾದವರು ಪಾಲ್ಗೊಂಡಿದ್ದರು.

ತಂಡಗಳ ರದ್ದತಿಗೆ ನಕಾರ:
ಸಭೆಯಲ್ಲಿ ಭಾಗವಹಿಸಿದ್ದ ಐಪಿಎಲ್ ಆಡಳಿತ ಮಂಡಳಿ ಸದಸ್ಯ ಹಾಗೂ ಬಿಸಿಸಿಐ ನ ಮಾಜಿ ಖಜಾಂಚಿ ಅಜಯ್ ಶಿರ್ಕೆ ಅವರು ಸಿ.ಎಸ್.ಕೆ ಹಾಗೂ ಆರ್.ಆರ್ ತಂಡಗಳನ್ನು ರದ್ದುಗೊಳಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು. ಆದರೆ ಅದಕ್ಕೆ ಆಡಳಿತ ಮಂಡಳಿಯ ಇತರ ಸದಸ್ಯರು ಒಪ್ಪಲಿಲ್ಲ ಎನ್ನಲಾಗಿದೆ.    

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT