ಕ್ರೀಡೆ

ಕಳಂಕ ತೊಳೆಯಲು ಬಿಸಿಸಿಐ ದಿಟ್ಟ ಕ್ರಮ: ವಿವಿಎಸ್ ಲಕ್ಷ್ಮಣ್

ಐಪಿಎಲ್ ಬೆಟ್ಟಿಂಗ್ ನಿಂದಾಗಿ ಕ್ರಿಕೆಟ್ ಗೆ ಅಂಟಿರುವ ಕಳಂಕವನ್ನು ತೊಡೆದುಹಾಕುವಲ್ಲಿ ಬಿಸಿಸಿಐ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ವಿವಿಎಸ್ ಲಕ್ಷ್ಮಣ್

ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ನಿಂದಾಗಿ ಕ್ರಿಕೆಟ್ ಗೆ ಅಂಟಿರುವ ಕಳಂಕವನ್ನು ತೊಡೆದುಹಾಕುವಲ್ಲಿ ಬಿಸಿಸಿಐ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂಬ ಆಶಯವನ್ನು ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಸಲಹೆಗಾರ ವಿವಿಎಸ್ ಲಕ್ಷ್ಮಣ್ ವ್ಯಕ್ತಪಡಿಸಿರುವುದಾಗಿ ಖಾಸಗಿ ಮಾಧ್ಯಮದ ವರದಿ ತಿಳಿಸಿದೆ

ಐಪಿಎಲ್ ಬೆಟ್ಟಿಂಗ್ ಹಗರಣ ನಡೆದಿದ್ದು ದುರದೃಷ್ಟಕರ ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಇತ್ತೀಚೆಗಷ್ಟೇ ನಿವೃತ್ತ ನ್ಯಾ.ಆರ್.ಎಂ ಲೋಧಾ ನೀಡಿರುವ ಆದೇಶಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಿದೆ ಎಂದರು.

ಐಪಿಎಲ್ ತಂದಗಳಾದ ಚೆನ್ನೈ ಸೂಪರ್ ಕಿಂಗ್ಸ್(ಸಿ.ಎಸ್.ಕೆ) ಹಾಗೂ ರಾಜಸ್ಥಾನ ರಾಯಲ್ಸ್(ಆರ್.ಆರ್) ತಂಡಗಳನ್ನು ಎರಡು ವರ್ಷಗಳ ಕಾಲ ಐಪಿಎಲ್ ನಿಂದ ನಿಷೇಧಿಸಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ಲಕ್ಷ್ಮಣ್ ಕ್ರಿಕೆಟ್ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲಾ ಕಪ್ಪುಮಸಿಗಳ ಹೊರತಾಗಿಯೂ ಕ್ರಿಕೆಟ್ ಬೆಳಗಬೇಕು ಇದಕ್ಕಾಗಿ ಬಿಸಿಸಿಐ ಉತ್ತಮ ಕ್ರಮಗಳನ್ನು ಕೈಗೊಂಡು ಐಪಿಎಲ್ ಗೆ ಅಂಟಿಕೊಂಡಿರುವ ಕಳಂಕವನ್ನು ತೊಡೆದುಹಾಕಬೇಕಿದೆ ಎಂದೂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT