ಎಸ್. ಶ್ರೀಶಾಂತ್ 
ಕ್ರೀಡೆ

ಶ್ರೀಶಾಂತ್ ಮತ್ತು ಇನ್ನಿಬ್ಬರ ವಿರುದ್ಧ ಬಿಸಿಸಿಐ ನಿಷೇಧಾಜ್ಞೆ ಮುಂದುವರಿಯಲಿದೆ

2013 ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ದೋಷ ಮುಕ್ತರಾದರೂ ಕ್ರಿಕೆಟಿಗರಾದ ಎಸ್. ಶ್ರೀಶಾಂತ್, ಅಂಕಿತ್ ಚೌವಾಣ್ ಮತ್ತು ಅಜಿತ್ ಚಾಂಡೀಲಾ...

ನವದೆಹಲಿ: 2013 ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ದೋಷ ಮುಕ್ತರಾದರೂ ಕ್ರಿಕೆಟಿಗರಾದ ಎಸ್. ಶ್ರೀಶಾಂತ್, ಅಂಕಿತ್ ಚೌವಾಣ್ ಮತ್ತು ಅಜಿತ್ ಚಾಂಡೀಲಾ ಅವರಿಗೆ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು ಈಗಲೇ ಹಿಂಪಡೆಯುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹೇಳಿದೆ.

2013ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಎಸ್. ಶ್ರೀಶಾಂತ್, ಅಂಕಿತ್ ಚೌವಾಣ್ ಮತ್ತು ಅಜಿತ್ ಚಾಂಡೀಲಾ ಸೇರಿದಂತೆ 36 ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ನಂತರ ಆರೋಪ ಸಾಬೀತಾಗಲು ಯಾವುದೇ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಶನಿವಾರ ಪಟಿಯಾಲಾ ಹೌಸ್ ಕೋರ್ಟ್ ಪ್ರಸ್ತುತ ಪ್ರಕರಣದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ಪ್ರಕಟಿಸಿತ್ತು.

ಆದರೆ ಈ ಆಟಗಾರರು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ದೋಷ ಮುಕ್ತರಾಗಿದ್ದರೂ ಸದ್ಯ ಇವರ ಮೇಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯುವುದಿಲ್ಲ.ಆದಾಗ್ಯೂ, ಆಟಗಾರರ ಬಗ್ಗೆ ಸ್ವತಂತ್ರ ತನಿಖೆ ನಡೆಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳುವುದು ಎಂದು ಬಿಸಿಸಿಐ ಶನಿವಾರ ಹೇಳಿಕೆ ನೀಡಿದೆ.

ಹಗರಣದಲ್ಲಿ ತನಿಖೆಗೊಳಗಾಗಿದ್ದ ಈ ಮೂವರು ಆಟಗಾರರು ಜೈಲುವಾಸ ಅನುಭವಿಸಿದ್ದರು. ಅದರಲ್ಲಿ ಶ್ರೀಶಾಂತ್ ಮತ್ತು ಚೌಹಾಣ್ ಬಿಸಿಸಿಐ ಇಂದ ಅಜೀವ ನಿಷೇಧಕ್ಕೊಳಪಟ್ಟವರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT