ವಿರಾಟ್ ಕೊಹ್ಲಿ 
ಕ್ರೀಡೆ

ಶಾಸ್ತ್ರಿ ನೇಮಕ ನಮ್ಮ ವಿಶ್ವಾಸ ಹೆಚ್ಚಿಸಿದೆ: ವಿರಾಟ್ ಕೊಹ್ಲಿ

ಬಾಂಗ್ಲಾದೇಶ ವಿರುದ್ಧದ ಟೂರ್ನಿಗೆ ಟೀಂ ಇಂಡಿಯಾ ಮಾಜಿ ನಾಯಕ ರವಿಶಾಸ್ತಿ ಅವರನ್ನು ಮತ್ತೆ ತಂಡದ ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಬಿಸಿಸಿಐ...

ನವದೆಹಲಿ: ಬಾಂಗ್ಲಾದೇಶ ವಿರುದ್ಧದ ಟೂರ್ನಿಗೆ ಟೀಂ ಇಂಡಿಯಾ ಮಾಜಿ ನಾಯಕ ರವಿ ಶಾಸ್ತ್ರಿ ಅವರನ್ನು ಮತ್ತೆ ತಂಡದ ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಬಿಸಿಸಿಐ ನಿರ್ಧಾರವನ್ನು ವಿರಾಟ ಕೊಹ್ಲಿ ಸ್ವಾಗತಿಸಿದ್ದು, ಶಾಸ್ತ್ರಿ ನೇಮಕ ನಮ್ಮ ವಿಶ್ವಾಸ ಹೆಚ್ಚಿಸಿದೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ ಹಾಗೂ ವಿಶ್ವಕಪ್ ಪಂದ್ಯಾವಳಿ ವೇಳೆಯೂ ರವಿ ಶಾಸ್ತ್ರಿ ಅವರೇ ಟೀಂ ಇಂಡಿಯಾ ನಿರ್ದೇಶಕರಾಗಿದ್ದರು. ಈಗ ಮತ್ತೆ ಜೂನ್ 10ರಿಂದ ಆರಂಭವಾಗುವ ಬಾಂಗ್ಲಾ ಪ್ರವಾಸಕ್ಕೆ ತೆರಳುತ್ತಿದ್ದಾರೆ.

'ಅವರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವಂತ ವ್ಯಕ್ತಿ ಅಲ್ಲ ಮತ್ತು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತ ವ್ಯಕ್ತಿ' ಎಂದು ಕೊಹ್ಲಿ ಇಎಸ್‌ಪಿಎನ್ ಕ್ರಿಕ್‌ಇನ್ಫೋ ತಿಳಿಸಿದ್ದಾರೆ.

'ಅವರ ವಿಚಾರಗಳ ಬಗ್ಗೆ ಬೇರೆ ರೀತಿ ವಿಚಾರ ಮಾಡುವ ಅಗತ್ಯ ಇಲ್ಲ. ಅಂತಹ ಅದ್ಭುತ ವ್ಯಕ್ತಿ ಮತ್ತೆ ತಂಡಕ್ಕೆ ಸಿಕ್ಕಿದ್ದಾರೆ' ಎಂದು ಕೊಹ್ಲಿ ಹೇಳಿದ್ದಾರೆ.

ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಒಂದು ಟೆಸ್ಟ್ ಪಂದ್ಯ ಹಾಗೂ ಮೂರು ಏಕದಿನ ಪಂದ್ಯವನ್ನಾಡಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT