ಆಫ್ ಸ್ಪಿನ್ನರ್ ಸಯೀದ್ ಅಜ್ಮಲ್ 
ಕ್ರೀಡೆ

ಪಾಕಿಸ್ತಾನ ತಂಡದಿಂದ ಅಜ್ಮಲ್‍ಗೆ ಕೊಕ್, ಶೆಹಜಾದ್ ವಾಪಸ್

ಮುಂಬರುವ ಶ್ರೀಲಂಕಾ ಟೆಸ್ಟ್ ಕ್ರಿಕೆಟ್ ಪ್ರವಾಸಕ್ಕಾಗಿ 15 ಸದಸ್ಯರ ಪಾಕಿಸ್ತಾನ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಆಫ್ ಸ್ಪಿನ್ನರ್...

ಕರಾಚಿ: ಮುಂಬರುವ ಶ್ರೀಲಂಕಾ ಟೆಸ್ಟ್ ಕ್ರಿಕೆಟ್ ಪ್ರವಾಸಕ್ಕಾಗಿ 15 ಸದಸ್ಯರ ಪಾಕಿಸ್ತಾನ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಆಫ್ ಸ್ಪಿನ್ನರ್ ಸಯೀದ್ ಅಜ್ಮಲ್ ಅವರನ್ನು ಕೈಬಿಡಲಾಗಿದ್ದು, ಅಹ್ಮದ್ ಶೆಹಜಾದ್, ಶಾನ್ ಮಸೂದ್ ಮತ್ತು ಎಹಸಾನ್ ಆದಿಲ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ತಂಡ ಪ್ರತಿನಿಧಿಸಿದ್ದ ಅಜ್ಮಲ್ ಗೆ ಕೊಕ್ ನೀಡಲು ಆಯ್ಕೆದಾರರು ನಿರ್ಧರಿಸಿದ್ದಾರೆ. ಈ ಮಧ್ಯೆ 2015ರ ವಿಶ್ವಕಪ್ ಪಂದ್ಯಾವಳಿ ನಂತರ ಅಶಿಸ್ತಿನ ಕಾರಣಕ್ಕೆ ಟೆಸ್ಟ್ ಹಾಗೂ ಏಕದಿನ ಈ ಎರಡೂ ಮಾದರಿಗಳಿಂದ ಶೆಹಜಾದ್ ಅವರನ್ನು ಹೊರಗಿಡಲಾಗಿತ್ತು. ಬಳಿಕ ಜಿಂಬಾಬ್ವೆ ವಿರುದ್ಧದ  ಸರಣಿಗೆ ಅವರನ್ನು ಆಯ್ಕೆಡಲಾಗಿತ್ತಾದರೂ, ಬೆಂಚ್ ಆಟಗಾರರಾಗಿಯೇ ಉಳಿದುಕೊಂಡಿದ್ದರು.
ಪಾಕಿಸ್ತಾನ ಟೆಸ್ಟ್ ತಂಡದ ಪ್ರತಿಭಾನ್ವಿತ ಆಟಗಾರರಾಗಿರುವ ಶೆಹಜಾದ್‍ಗೆ ಒಂದು ಅವಕಾಶ ನೀಡುವ ಉದ್ದೇಶದಿಂದ ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯ ಆಯ್ಕೆದಾರ ಹರೂನ್ ರಶೀದ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿವೆ. ಮೊದಲ ಟೆಸ್ಟ್ ಪಂದ್ಯ ಜೂನ್ 17ರಿಂದ ಗಾಲೆಯಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟಿ-20 ಸರಣಿ ನಡೆಯಲಿವೆ.
ಪಾಕಿಸ್ತಾನ ತಂಡ: ಮೊಹಮ್ಮದ್ ಹಫೀಜ್, ಅಹ್ಮದ್ ಶೆಹಜಾದ್, ಶಾನ್ ಮಸೂದ್, ಅಜರ್ ಅಲಿ, ಮಿಸ್ಬಾ-ಉಲ್-ಹಕ್ (ನಾಯಕಿ), ಯೂನಿಸ್ ಖಾನ್, ಅಸಾದ್ ಶಫೀರ್, ಹ್ಯಾರಿಸ್ ಸೊಹೇಲ್, ಸರ್ಫರಾಜ್ ಅಹ್ಮದ್ (ವಿಕೆಟ್ ಕೀಪರ್), ಯಾಸಿರ್ ಶಾ, ಜುಲ್ಫೀಕರ್ ಬಬರ್, ವಾಹಬ್ ರಿಯಾಜ್, ಜುನೈದ್ ಖಾನ್, ಇಮ್ರಾನ್ ಖಾನ್, ಎಹಸಾನ್ ಆದಿಲ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT