ಭಾರತ ಕ್ರಿಕೆಟ್ ತಂಡ 
ಕ್ರೀಡೆ

ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜು

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಿದ್ದತೆ ನಡೆಸಿದ್ದಾರೆ...

ಡಾಕಾ: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಿದ್ದತೆ ನಡೆಸಿದ್ದಾರೆ, ಭಾರತ ಏಕದಿನ ತಂಡದಲ್ಲಿನ ಎಂಟು ಆಟಗಾರರು ಸುದೀರ್ಘ ವಿರಾಮದ ನಂತರ ಈಗ ಏಕದಿನ ಸರಣಿಗೆ ಸಜ್ಜಾಗಿದ್ದಾರೆ, ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಜತೆಗೆ ಸ್ಟುವರ್ಟ್ ಬಿನ್ನಿ, ರವೀಂದ್ರ ಜಡೇಜಾ, ಅಕ್ಷರಾ ಪಟೇಲ್, ಸುರೇಶ್ ರೈನಾ, ಮೋಹಿತ್ ಶರ್ಮಾ, ಧವಳ್ ಕುಲಕರ್ಣಿ  ಮತ್ತು ಅಂಬಟಿ ರಾಯುಡು, ಸೋಮವಾರ ಬಾಂಗ್ಲಾಗೆ ಆಗಮಿಸಿದರು. ಮಂಗಳವಾರ ಮೀರ್ ಪುರದ ಶೇರ್  ಎ ಬಾಂಗ್ಲಾ  ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸಿದರು,

ಮಳೆಯಿಂದ ಅಡಚಣೆಗೊಳಗಾದ ಟೆಸ್ಟ್ ಪಂದ್ಯದಲ್ಲಿ ಅತಿಥೇಯರ ವಿರುದ್ಧ ಪ್ರಾಬಲ್ಯ ಮೆರೆದಿದ್ದ ಭಾರತ ತಂಡ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿದೆ. ಕೆಲ ಆಟಗಾರರು ಏಕದಿನ ತಂಡದಲ್ಲಿ ಮುಂದುವರಿಯಲಿದ್ದು, ಉಳಿದ ಆಟಗಾರರು ತವರಿಗೆ ಮರಳಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ತಂಡದ ತಂಡದ ಮ್ಯಾನೇಜರ್ ವಿಶ್ವರೂಪ್ ಡೇ, ತವರಿಗೆ ಮರಳಿದ ಆಟಗಾರರಿಗೆ ಬೀಳ್ಕೊಡುಗೆ ನೀಡಲು ನಿರ್ಧರಿಸಲಾಗಿತ್ತು ಎಂದರು,
ಜೂನ್ 18 ರಂದು ಮೊದಲ ಏಕದಿನ ಪಂದ್ಯ ಆರಂಭವಾಗಲಿದ್ದು, ನಂತರ 21 ಹಾಗೂ 24 ರಂದು ಕ್ರಮವಾಗಿ 2ನೇ ಹಾಗೂ ಮೂರನೇ ಪಂದ್ಯಗಳು ನಡೆಯಲಿವೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT