ಜಗಮೋಹನ್ ದಾಲ್ಮಿಯಾ 
ಕ್ರೀಡೆ

ಡಿಆರ್ ಎಸ್ ನಿರ್ಧಾರ ಬದಲಿಸಲ್ಲ, ಆದರೂ ಮಾತುಕತೆಗೆ ಸಿದ್ಧ: ದಾಲ್ಮಿಯಾ

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಂತರ ಅಂಪೈರ್ ಡಿಸಿಷನ್ ರಿವ್ಯೂ ಸಿಸ್ಟಮ್ ಬಗ್ಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸಕಾರಾತ್ಮಕ

ಕೋಲ್ಕೊತಾ: ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಂತರ ಅಂಪೈರ್ ಡಿಸಿಷನ್ ರಿವ್ಯೂ ಸಿಸ್ಟಮ್ ಬಗ್ಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸಕಾರಾತ್ಮಕ ಮಾತನಾಡಿದ್ದರು. ಈ  ಕುರಿತು ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ, ಮಂಡಳಿ ವಿತಾರವಾಗಿ ತನ್ನ ನಿಲುವು ಬದಲಿಸುವುದಿಲ್ಲ. ಆದರೆ ಮಾತುಕತೆಗೆ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಎನ್ ಶ್ರೀನಿವಾಸನ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಿಸಿಸಿಐ, ಡಿಆರ್ ಎಸ್ ವಿರುದ್ಧವಾದ ಸ್ವಷ್ಟ ನಿರ್ಧಾರ ತಾಳಿತ್ತು. ಆದರೆ ಜಗಮೋಹನ್ ದಾಲ್ಮಿಯಾ ಅವರು ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದಾರೆ. ಈ ಮೂಲಕ ತಂತ್ರಜ್ಞಾನ ಮತ್ತಷ್ಟು ಸುಧಾರಣೆ ಕಂಡ ನಂತರ ಭವಿಷ್ಯದಲ್ಲಿನ ಸರಣಿಗಳಲ್ಲಿ ಬಳಸಲು ಒಪ್ಪಿಗೆ ನೀಡುವ ಸಾಧ್ಯತೆಗಳಿವೆ,

ಡಿಐರ್ ಎಸ್ ಕುರಿತಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ಧಾರ ಹಾಗೇ ಮುಂದುವರಿಯಲಿದೆ. ಹಾಗೆಂದು ನಾವು ಮಾತುಕತೆ ನಡೆಸಲು ನಿರಾಕರಿಸುವುದಿಲ್ಲ. ಈ ತಂತ್ರಜ್ಞಾನ ಮತ್ತಷ್ಟು ಸುಧಾರಣೆಯಾದರೆ, ಅದರ ಬಗ್ಗೆ ಚರ್ಚಿಸುತ್ತೇವೆ ಎಂದರು.

ಈ ಹಿಂದೆ ಡಿಆರ್ ಎಸ್ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ಕೊಹ್ಲಿ, ಈ ಬಗ್ಗೆ ಎಲ್ಲರು ಕುಳಿತು ಚರ್ಚೆ ನಡೆಸಬೇಕು. ಅಲ್ಲದೇ ಈ ಬಗ್ಗೆ ಬೌಲರ್ ಗಳ ಅಭಿಪ್ರಾಯ ಪಡೆಯಬೇಕು, ಅಲ್ಪ ಸಮಯಾವಕಾಶದಲ್ಲಿ ಈ ಟೆಸ್ಟ್ ನಲ್ಲಿ ಆಡಿದ್ದೇವೆ. ಈಗ ಸಾಕಷ್ಟಪ ಕಾಲವಕಾಶವಿದ್ದು, ಈ ಬಗ್ಗೆ ಚಿಂತನೆ ನಡೆಸಬಹುದು ಎಂದರು. ಡಿಆರ್ ಎಸ್ ಸಂಪೂರ್ಣವಾಗಿ ದೋಷ ಮುಕ್ತವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂಬ ವಿರೋಧದ ಮಾತುಗಳು ಕೇಳಿ ಬಂದಿವೆ.

ಈ ವಿಚಾರದಲ್ಲಿ ತಂತ್ರಜ್ಞಾನ ಹೆಚ್ಚು ಪ್ರಾಮುಖ್ಯತೆ ಪಡೆದಿರುವುದರಿಂದ ಕ್ರಿಕೆಟ್ ಸಲಹಾ ಸಮಿತಿ ಈ ಕುರಿತ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ದಾಲ್ಮಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT