ಆರ್ ಅಶ್ವಿನ್ 
ಕ್ರೀಡೆ

ನಾಯಕ ಧೋನಿ ಸಮರ್ಥಿಸಿಕೊಂಡ ಅಶ್ವಿನ್

ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಭುಗಿಲೇಳುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿರುವ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸರಣಿ ಸೋಲಿನ...

ಮೀರ್ ಪುರ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಭುಗಿಲೇಳುತ್ತಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿರುವ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಸರಣಿ ಸೋಲಿನ ದೋಷವನ್ನು ಧೋನಿ ತಲೆಗೆ ಕಟ್ಟುವುದು ಸರಿಯಲ್ಲ ಎಂದಿದ್ದಾರೆ ಎಂದು ಖಾಸಗಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಢಾಕಾದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, `ಧೋನಿ, ಭಾರತ ಕ್ರಿಕೆಟ್ ರಂಗದ ದಂತಕಥೆ. ಬಾಂಗ್ಲಾದೇಶದ ಸರಣಿ ಸೋಲು ತಂಡದ ಸಾಂಸ್ಥಿಕ ಪ್ರದರ್ಶನದ ಕೊರತೆಯಿಂದ ಉಂಟಾಗಿದ್ದು. ಇದಕ್ಕೆ ಧೋನಿಯೊಬ್ಬರೇ ಕಾರಣರಲ್ಲ' ಎಂದಿದ್ದಾರೆ. ಅಲ್ಲದೆ ಬಾಂಗ್ಲಾದೇಶ ವಿರುದ್ಧ ಸರಣಿ ಸೋತ ತಂಡಗಳ ಪೈಕಿ ಭಾರತ ಮೊದಲ ತಂಡವೇನು ಅಲ್ಲ ಎಂದು ಅಶ್ವಿನ್ ಹೇಳಿದ್ದಾರೆ. ತಂಡದ ಹಿರಿಯ ಆಟಗಾರ ಸುರೇಶ್ ರೈನಾ ಸಹ ಅಶ್ವಿನ್ ವಾದವನ್ನು ಅನುಮೋದಿಸಿದ್ದಾರೆ. `ಸರಣಿ ಸೋಲಿಗೆ  ಧೋನಿಯವರನ್ನು ದೂರುವುದು ಸಲ್ಲ' ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT