ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಅಧ್ಯಕ್ಷ ಎನ್. ರಾಮಚಂದ್ರನ್ 
ಕ್ರೀಡೆ

ಬಾತ್ರಾಗೆ ರು.15 ಕೋಟಿ ಮಾನನಷ್ಟ ಪರಿಹಾರ ಕೇಳಿದ ಐಒಎ ಅಧ್ಯಕ್ಷ

ಹಾಕಿ ಇಂಡಿಯಾ ಅಧ್ಯಕ್ಷರಾದ ನರೇಂದ್ರ ಬಾತ್ರಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಅಧ್ಯಕ್ಷ ಎನ್. ರಾಮಚಂದ್ರನ್ ಅವರು ರು.10 ಕೋಟಿ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.

ನವದೆಹಲಿ: ಹಾಕಿ ಇಂಡಿಯಾ ಅಧ್ಯಕ್ಷರಾದ ನರೇಂದ್ರ ಬಾತ್ರಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಅಧ್ಯಕ್ಷ ಎನ್. ರಾಮಚಂದ್ರನ್ ಅವರು ರು.10 ಕೋಟಿ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ, ಬಾತ್ರಾ ಅವರು, ರಾಮಚಂದ್ರನ್ ವಿರುದ್ಧ ಲಂಚದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಕುಪಿತಗೊಂಡಿರುವ ರಾಮಚಂದ್ರನ್, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ  ಹೂಡಿದ್ದಾರಲ್ಲದೆ, 15 ದಿನಗಳಲ್ಲಿ ತಾವು ಕೇಳಿರುವ ಪರಿಹಾರವನ್ನೂ ನೀಡುವಂತೆ ನೋಟಿಸ್ ಕಳುಹಿಸಿದ್ದಾರೆ. ಬಾತ್ರಾ ಅವರ ಆರೋಪಗಳನ್ನು `ದುರುದ್ದೇಶಪೂರಿತ' ಎಂದು ಬಣ್ಣಿಸಿರುವ ಅವರು, `ಬಾತ್ರಾ ಹೇಳಿರುವ ನನ್ನ ವಿರುದ್ಧದ ಎಲ್ಲಾ ಹೇಳಿಕೆಗಳೂ ತಪ್ಪು.ಸಾರ್ವಜನಿಕರ ಹಾಗೂ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಅಧೀನದಲ್ಲಿರುವ ಎಲ್ಲಾ ಸದಸ್ಯರು, ಸಂಸ್ಥೆಗಳ ಕಣ್ಣಿಗೆ ನಾನು ಹಗುರವಾಗುವಂಥ ಹೇಳಿಕೆಗಳನ್ನು ಅವರು ನೀಡಿದ್ದಾರೆ' ಎಂದಿದ್ದಾರೆ.

ಮಾನನಷ್ಟ ಮೊಕದ್ದಮೆ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡಿರುವ ರಾಮಚಂದ್ರನ್ ಅವರ ವಕೀಲ ಹರಿಶಂಕರ್ ಮಣಿ, `ನಮ್ಮ ಕಕ್ಷಿದಾರರ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT