ರವೀಂದ್ರ ಜಡೇಜ, ಸುರೇಶ್ ರೈನಾ 
ಕ್ರೀಡೆ

ಲಂಚಾರೋಪ: ಮೂವರು ಕ್ರಿಕೆಟಿಗರ ವಿರುದ್ಧ ಬಾಂಬ್ ಸಿಡಿದ ಲಲಿತ್ ಮೋದಿ

ಐಪಿಎಲ್‌‌‌ನ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್...

ನವದೆಹಲಿ: ಐಪಿಎಲ್‌‌‌ನ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ.

ಲಲಿತ್  ಮೋದಿ ಆರೋಪಿಸಿರುವರಲ್ಲಿ ಇಬ್ಬರು ಭಾರತ ಕ್ರಿಕೆಟ್‌ ತಂಡದ ಮುಂಚೂಣಿ ಆಟಗಾರರಾದ ಸುರೇಶ್ ರೈನಾ ಹಾಗೂ ರವೀಂದ್ರ ಜಡೇಜ. ಮತ್ತೊರ್ವ ವೆಸ್ಟ್‌ ಇಂಡೀಸ್‌ ಆಟಗಾರ ಡ್ವೈನ್ ಬ್ರಾವೋ. ಈ ಮೂವರೂ ಕೂಡ ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು ಕೇಳಿಬಂದಿದೆ.

ಈ ಮೂವರು ಆಟಗಾರರೂ ಕೂಡ ರಿಯಲ್‌ ಎಸ್ಟೇಟ್‌ ಉದ್ಯಮಿಯೋರ್ವರಿಂದ ಲಂಚ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ಅಗತ್ಯ ಮಾಹಿತಿಗಳನ್ನು ಅಂದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಸಿಇಓ ಡೇವ್‌ ರಿಚರ್ಡಸನ್‌ ಅವರಿಗೆ 2013ರ ಜೂನ್‌ನಲ್ಲಿಯೇ ನೀಡಿರುವುದಾಗಿ ಲಲಿತ್ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೊನೆಯಲ್ಲಿ ಲಂಚ ಪಡೆದಿರುವ ಮೂವರು ಆಟಗಾರರು ರಿಯಲ್‌ ಎಸ್ಟೇಟ್‌ ಉದ್ಯಮಿಗೆ ಬಹಳ ಆಪ್ತರಾಗಿದ್ದಾರೆ. ಆದರೆ ಇವರು ಲಂಚ ಪಡೆದ ಬಗ್ಗೆ ಕೇವಲ ಬಲ್ಲ ಮೂಲಗಳಿಂದ ತಿಳಿದಿದೆ. ಇದು ಸತ್ಯವಲ್ಲ ಎಂಬುದು ನನ್ನ ಭಾವನೆ. ಒಂದು ವೇಳೆ ಈ ಆರೋಪ ಸತ್ಯವಾಗಿದ್ದಲ್ಲಿ ಇದರಲ್ಲಿ ಇನ್ನೂ ಹಲವು ಮಂದಿ ಆಟಗಾರರು ಭಾಗಿಯಾಗಿರಬಹುದು ಎಂದೂ ಕೂಡ ಲಲಿತ್ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT