ಲಲಿತ್ ಮೋದಿ, ಸುರೇಶ್ ರೈನಾ ಮತ್ತು ರವೀಂದ್ರ ಜಡೇಜಾ 
ಕ್ರೀಡೆ

ಕ್ರಿಕೆಟಿಗರ ಲಂಚಾರೋಪ ಪ್ರಕರಣ: ಇಮೇಲ್ ಬಂದಿದ್ದು ನಿಜ ಎಂದ ಐಸಿಸಿ

ಭಾರತೀಯ ಆಟಗಾರರ ಲಂಚಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್ ಹಗರಣದ ಪ್ರಮುಖ ಆರೋಪಿ ಲಲಿತ್ ಮೋದಿ ಅವರು ಕ್ರಿಕೆಟ್‌ ಸಮಿತಿ ಸಿಇಓ ಡೇವ್‌ ರಿಚರ್ಡಸನ್‌ ಅವರಿಗೆ ಇಮೇಲ್ ಮಾಡಿರುವುದು ಸತ್ಯ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ...

ಮುಂಬೈ: ಭಾರತೀಯ ಆಟಗಾರರ ಲಂಚಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್ ಹಗರಣದ ಪ್ರಮುಖ ಆರೋಪಿ ಲಲಿತ್ ಮೋದಿ ಅವರು ಕ್ರಿಕೆಟ್‌ ಸಮಿತಿ ಸಿಇಓ ಡೇವ್‌ ರಿಚರ್ಡ್ ಸನ್‌ ಅವರಿಗೆ ಇಮೇಲ್ ಮಾಡಿರುವುದು ಸತ್ಯ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಭಾನುವಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಅಧಿಕೃತವಾಗಿ ಮಾಹಿತಿ ನೀಡಿರುವ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಆಟಗಾರರ ಲಂಚಾರೋಪ ಪ್ರಕರಣ ಸಂಬಂಧಿಸಿದಂತೆ  (ಎಸಿಎಸ್ ಯು) ಭ್ರಷ್ಟಾಚಾರ ವಿರೋಧಿ ಮತ್ತು ಭದ್ರತಾ ಘಟಕವು ತನಿಖೆ ನಡೆಸುತ್ತಿದ್ದು, ತನಿಖೆ ವೇಳೆ  ಡೇವ್ ರಿಚರ್ಡ್ ಸನ್‌ ಅವರಿಗೆ ಲಲಿತ್ ಮೋದಿ ಗೌಪ್ಯ ಮಾಹಿತಿ ನೀಡಿರುವುದು ಸತ್ಯ ಎಂಬುದು ತಿಳಿದುಬಂದಿದೆ ಎಂದು ಹೇಳಿದೆ..

ವೀಸಾ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ್ದ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಭಾರತದ ಇಬ್ಬರು ಹಾಗೂ ವೆಸ್ಟ್ ಇಂಡೀಸ್ ತಂಡದ ಓರ್ವ ಆಟಗಾರರು ರಿಯಲ್ ಎಸ್ಟೇಟ್ ಉದ್ಯಮಿಯಿಂದ ಲಂಚ ಪಡೆದಿದ್ದಾರೆ ಎಂದು ಹೇಳುವ ಮೂಲಕ ಕ್ರೀಡಾ ವಲಯದಲ್ಲೂ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದರು.

ಭಾರತ ತಂಡದ ಆಟಗಾರರಾದ ಸುರೇಶ್ ರೈನಾ, ರವೀಂದ್ರ ಜಡೇಜ ಹಾಗೂ ವೆಸ್ಟ್ ಇಂಡೀಸ್ ತಂಡದ ಆಟಗಾರ ಡ್ರೈನ್ ಬ್ರಾವೋ ವಿರುದ್ಧ ಲಲಿತ್ ಮೋದಿ ಅವರು ಆರೋಪ ವ್ಯಕ್ತಪಡಿಸಿದ್ದಲ್ಲದೇ, ಈ ಮೂವರು ಆಟಗಾರರು ರಿಯಲ್ ಎಸ್ಟೇಟ್ ಉದ್ಯಮಿಗೆ ಬಹಳ ಆಪ್ತರಾಗಿದ್ದು, ಲಂಚವನ್ನು ಫ್ಲಾಟ್ ಹಾಗೂ ಹಣದ ಮೂಲಕ ಪಡೆದಿದ್ದಾರೆ. ನನಗೆ ಬಂದಿದ್ದ ಮಾಹಿತಿಯ ಪ್ರಕಾರ ಓರ್ವ ಆಟಗಾರ 20 ಕೋಟಿ ಹಣ ಪಡೆದಿದ್ದರು ಎಂದು ತಿಳಿದುಬಂದಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಈ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಸಿಇಓ ಡೇವ್ ರಿಚರ್ಡಸನ್ ಅವರಿಗೆ 2013ರ ಜೂನ್ ತಿಂಗಳಿನಲ್ಲಿಯೇ ಮಾಹಿತಿ ನೀಡಲಾಗಿತ್ತು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್