ಬಾಕ್ಸರ್ ವಿಜೇಂದರ್ ಸಿಂಗ್ 
ಕ್ರೀಡೆ

ಭಾರತದಲ್ಲಿ ಬಾಕ್ಸಿಂಗ್ ವೃತ್ತಿಜೀವನಕ್ಕೆ ವಿಜೇಂದರ್ ಗುಡ್ ಬೈ: ಇಂಗ್ಲೆಂಡ್ ಪ್ರತಿನಿಧಿಸುವ ಸಾಧ್ಯತೆ

ಬಾಕ್ಸರ್ ವಿಜೇಂದರ್ ಸಿಂಗ್ ಇನ್ನು ಮುಂದೆ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಇಂಗ್ಲೆಂಡ್ ದೇಶವನ್ನು ಪ್ರತಿನಿಧಿಸಬಹುದು ಎಂದು ಡೈಲಿ ಮೇಲ್ ವರದಿ ಮಾಡಿದೆ.

ನವದೆಹಲಿ: ಒಲಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಶೀಘ್ರವೇ ಭಾರತವನ್ನು ತೊರೆಯಲಿದ್ದು, ಇನ್ನು ಮುಂದೆ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಇಂಗ್ಲೆಂಡ್ ದೇಶವನ್ನು ಪ್ರತಿನಿಧಿಸಬಹುದು ಎಂದು ಡೈಲಿ ಮೇಲ್ ವರದಿ ಮಾಡಿದೆ.

ಜೂ.29 ರಂದು ಸುದ್ದಿಗೋಷ್ಠಿ ನಡೆಸಲಿರುವ ಅವರು ತಮ್ಮ ಮುಂದಿನ ವೃತ್ತಿಜೀವನದ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರೋಚಕ ಮಾಹಿತಿಯೊಂದು ಹೊರಬೀಳುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕೆಲವಾರು ತಿಂಗಳುಗಳಿಂದೀಚೆಗೆ ಲಂಡನ್ ನಲ್ಲೇ ವಾಸ್ತವ್ಯ ಹೂಡಿರುವ ಅವರು ಸದ್ಯಕ್ಕೆ ಅಲ್ಲಿನ ಖ್ಯಾತ ಸಂಸ್ಥೆಯಾದ ಕ್ವೀನ್ಸ್ ಬೆರ್ರಿ ಪ್ರೊಮೋಷನ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅಲ್ಲೇ ತಮ್ಮ ತರಬೇತಿಯನ್ನು ಮುಂದುವರೆಸುವ ಮೂಲಕ ಭಾರತದಲ್ಲಿನ ತಮ್ಮ ವೃತ್ತಿಜೀವನಕ್ಕೆ ಇತಿಶ್ರೀ ಹಾಡಿ, ಇಂಗ್ಲೆಂಡ್ ನಲ್ಲಿ ತಮ್ಮ ಹೊಸ ಭವಿಷ್ಯ ಅರಸುವತ್ತ ದೃಷ್ಟಿ ಹಾಯಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಅಲ್ಲಿ ನಡೆಯುವ ಬಾಕ್ಸಿಂಗ್ ಪ್ರೊ ಲೀಗ್ ನಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.

ವಿಜೇಂದರ್ ಸಿಂಗ್ ಗೆ ಫ್ರಾನ್ಸಿಸ್ ವಾರೆನ್ ಎಂಬ ಕ್ರೀಡಾ ಪ್ರವರ್ತಕ ನೆರವು ನೀಡುತ್ತಿದ್ದಾರೆ. ಕ್ವೀನ್ಸ್ ಬೆರ್ರಿ ಸಂಸ್ಥೆಗೆ ಅವರು ಮಾಲೀಕರು ಹೌದು.

ಶಿಬಿರಕ್ಕೆ ಅನುಮಾನ: ಮುಂದಿನ ತಿಂಗಳು ನಡೆಯಲಿರುವ ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ತೆರಳಲಿರುವ ಭಾರತೀಯ ಬಾಕ್ಸರ್ ಗಳಿಗಾಗಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಕೆಲದಿನಗಳ ಹಿಂದೆ ರಾಷ್ಟ್ರೀಯ ಬಾಕ್ಸಿಂಗ್ ತರಬೇತುದಾರ ಗುರುಬಕ್ಷ್ ಸಿಂಗ್ ಅವರಿಗೆ ಪತ್ರ ಬರೆದಿದ್ದ ವಿಜೇಂದರ್ ಸಿಂಗ್, ತಾವು ಶಿಬಿರಕ್ಕೆ ಜು.13 ರಂದು ಹಾಜರಾಗುವುದಾಗಿ ತಿಳಿಸಿದ್ದರು. ತಾವು ಲಂಡನ್ ನಲ್ಲಿರುವ ಕ್ವೀನ್ಸ್ ಬೆರ್ರಿ ಸಂಸ್ಥೆಯಲ್ಲಿ ವಿಶೇಷ ತರಬೇತಿಗಾಗಿ ತೆರಳುತ್ತಿದ್ದು, ತರಬೇತಿ ಮುಗಿದ ಕೂಡಲೆ ಶಿಬಿರವನ್ನು ಸೇರಿಕೊಳ್ಳುವುದಾಗಿ ತಿಳಿಸಿದ್ದರು. ಆದರೆ ಲಂಡನ್ ಗೆ ತೆರಳಿದ ನಂತರ ಅಲ್ಲಿನ ಅನುಕೂಲತೆಗಳಿಗೆ ಮಾರುಹೋದ ಅವರು ಈಗ ಮನಸ್ಸು ಬದಲಾಯಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಭಾರತದಲ್ಲಿ ನಡೆಯಲಿರುವ ತರಬೇತಿ ಶಿಬಿರಕ್ಕೆ ಅವರು ಹಾಜರಾಗುವುದು ಬಹುತೇಕ ಅನುಮಾನ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT