ರಾಬಿನ್ ಉತ್ತಪ್ಪ, ಸ್ಟುವರ್ಟ್ ಬಿನ್ನಿ, ಮನೀಶ್ ಪಾಂಡೆ (ಸಂಗ್ರಹ ಚಿತ್ರ) 
ಕ್ರೀಡೆ

ಕ್ರಿಕೆಟ್ ತಂಡದಲ್ಲಿ ರಾಜ್ಯದ ಮೂವರು: ಮರುಕಳಿಸಿದ ಹಳೆಯ ನೆನಪು

ಜಾವ್ಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಸುನಿಲ್ ಜೋಷಿ ನಂತರ ಮೂವರು ಕರ್ನಾಟಕದ ಆಟಗಾರರು ಮತ್ತೊಮ್ಮೆ ಒಟ್ಟಿಗೆ ಭಾರತ ತಂಡದಲ್ಲಿ ಆಡಲಿದ್ದಾರೆ.

ಬೆಂಗಳೂರು: ಭಾರತ ಕ್ರಿಕೆಟ್ ತಂಡದಲ್ಲಿ, ಜಾವ್ಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಸುನಿಲ್ ಜೋಷಿ ನಂತರ ಮೂವರು ಕರ್ನಾಟಕದ ಆಟಗಾರರು ಮತ್ತೊಮ್ಮೆ ಒಟ್ಟಿಗೆ ಭಾರತ ತಂಡದಲ್ಲಿ ಆಡಲಿದ್ದಾರೆ.

ಜಿಂಬಾಂಬ್ವೆ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿರುವ ಆಯ್ಕೆ ಸಮಿತಿ ಕರ್ನಾಟಕದ ಮೂವರು ಆಟಗಾರರನ್ನು ಆಯ್ಕೆ ಮಾಡಿದ್ದು, ಜಾವ್ಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಅವಧಿಯ ಭಾರತ ತಂಡವನ್ನು ನೆನಪು ಮಾಡಿದೆ. ರಾಜ್ಯದ ರಾಬಿನ್ ಉತ್ತಪ್ಪ, ವಿಕೆಟ್ ಕೀಪರ್, ಆಲ್ರೌಂಡರ್ ಸ್ಟುವರ್ಟ್ ಬಿನ್ನಿ, ಮನೀಶ್ ಪಾಂಡೆ ಜಿಂಬಾಬ್ವೆ ಪ್ರವಾಸದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.    

ಹಲವು ಐಪಿಎಲ್ ತಂಡಗಳನ್ನು ಪ್ರತಿನಿಧಿಸುತ್ತಿರುವ ಕನ್ನಡಿಗರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ತುದಿಗಾಲಲ್ಲಿ ಕಾಯುತ್ತಿದ್ದಾರೆ ಎಂದು ಕರ್ನಾಟಕ ಕ್ರಿಕೆಟ್ ಅಕಾಡೆಮಿ ಕಾರ್ಯದರ್ಶಿ ಬ್ರಜೇಶ್ ಪಟೇಲ್ ಹೇಳಿದ್ದರು, ಈಗ ಭಾರತ ತಂಡದಲ್ಲಿ ಮೂವರು ಕರ್ನಾಟದ ಆಟಗಾರರು ಸ್ಥಾನ ಪಡೆದಿರುವುದು ಬ್ರಜೇಶ್ ಪಟೇಲ್ ಹೇಳಿಕೆಯನ್ನು ಸಾಬೀತುಪಡಿಸಿದೆ .

ಧವಳ್ ಕುಲಕರ್ಣಿ, ಬಿನ್ನಿ, ಭುವನೇಶ್ವರ್ ಕುಮಾರ್, ಮೋಹಿತ್ ಶರ್ಮಾ, ಸಂದೀಪ್ ಶರ್ಮಾ ತಂಡಕ್ಕೆ ಮರಳಿದ್ದಾರೆ, ಕರ್ನಾಟಕದ ಮತ್ತೊಬ್ಬ ಆಟಗಾರ ಆರ್. ವಿನಯ್ ಕುಮಾರ್ ಗೆ ಸ್ಥಾನ ದೊರೆಯದೆ ಇರುವುದು ಬೇಸರದ ಸಂಗತಿ. 2014 ರ ಏಷ್ಯಾ ಕಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ಹಾಗೂ ಈ ವರ್ಷ ನಡೆದ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಸ್ಟುವರ್ಟ್ಸ್ ಬಿನ್ನಿ ಉತ್ತಮ ಪ್ರದರ್ಶನ ನೀಡಿದ್ದರು. 4 ರನ್ ಗಳನ್ನು ನೀಡಿ 6 ವಿಕೆಟ್ ಪಡೆಯುವ ಮೂಲಕ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT