ಕ್ರೀಡೆ

ರಣಜಿ ಫೈನಲ್‍ಗೆ 2 ಬದಲಾವಣೆ

ತಮಿಳುನಾಡು ತಂಡದ ವಿರುದ್ಧ ಮಾರ್ಚ್ 8ರಿಂದ ಮುಂಬೈನಲ್ಲಿ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡ ಪ್ರಕಟಿಸಲಾಗಿದ್ದು,

ಬೆಂಗಳೂರು: ತಮಿಳುನಾಡು ತಂಡದ ವಿರುದ್ಧ ಮಾರ್ಚ್ 8ರಿಂದ ಮುಂಬೈನಲ್ಲಿ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡ ಪ್ರಕಟಿಸಲಾಗಿದ್ದು, ಎರಡು ಬದಲಾವಣೆ ಮಾಡಲಾಗಿದೆ.

ವಿಕೆಟ್ ಕೀಪರ್ ಸಿ.ಎಂ. ಗೌತಮ್ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದು ಅವರ ಬದಲಿಗೆ ಕೆ.ಸಿ. ಅವಿನಾಶ್‍ಗೆ ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಫಾರ್ಮ್ ಕೊರತೆಯಲ್ಲಿ ಬಳಲುತ್ತಿರುವ ಕುನಾಲ್ ಕಪೂರ್ ಸ್ಥಾನಕ್ಕೆ ಅಭಿಷೇಕ್ ರೆಡ್ಡಿ ಸ್ಥಾನ ಪಡೆದಿದ್ದಾರೆ. ಹಿರಿಯ ಅನುಭವಿ ಆಟಗಾರ ಸಿ.ಎಂ. ಗೌತಮ್, ಮುಂಬೈ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದ ವೇಳೆ ಕೀಪಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ನೆಲಕ್ಕೆ ಬಿದ್ದು ಸ್ನಾಯುಎಳೆತೆಕ್ಕೆ ಒಳಗಾಗಿದ್ದರು.

ಫೈನಲ್ ವೇಳೆಗೆ ಅವರು ಚೇತರಿಸಿಕೊಳ್ಳುವುದು ಅಸಾಧ್ಯವಾಗಿರುವ ಹಿನ್ನಲೆಯಲ್ಲಿ ರಾಜ್ಯ ಕ್ರಿಕೆಟ್ ಆಯ್ಕೆದಾರರು ಕೆ.ಸಿ. ಅವಿನಾಶ್‍ಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ವಿನಯ್ ಕುಮಾರ್ ನಾಯಕತ್ವದಲ್ಲಿಯೇ ಕಳೆದ ಬಾರಿ ಚಾಂಪಿಯಯನ್ ಪಟ್ಟ ಅಲಂಕರಿಸಿದ್ದ ಕರ್ನಾಟಕ, ಈಗ ಮತ್ತೆ ಅವರ ನಾಯಕತ್ವದಲ್ಲಿಯೇ ತಂಡ ಪ್ರಶಸ್ತಿ ಉಳಿಸಿಕೊಳ್ಳುವ ವಿಶ್ವಾಸದೊಂದಿಗೆ ಫೈನಲ್ ಅಖಾಡಕ್ಕಿಳಿಯಲಿದೆ.

ಬೆಂಗಳೂರಿನಲ್ಲಿಯೇ ನಡೆದಿದ್ದ ಸೆಮಿಫೈನಲ್ ನಲ್ಲಿ ಕರ್ನಾಟಕದ ಆಟಗಾರರು ಪ್ರಬಲ ಮುಂಬೈ ತಂಡದ ವಿರುದ್ಧ 112 ರನ್‍ಗಳ ಭರ್ಜರಿ ಜಯ ದಾಖಲಿಸಿ ಪ್ರಶಸ್ತಿ ಸುತ್ತು ತಲುಪಿದ್ದಾರೆ. ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡ, ಮಹಾರಾಷ್ಟ್ರ ವಿರುದ್ಧ ಮೊದಲ ಇನಿಂಗ್ಸ್ ಮುನ್ನಡೆ ಆಧಾರದ ಮೇಲೆ ಫೈನಲ್‍ಗೆ ಹೆಜ್ಜೆ ಇಟ್ಟಿದೆ.

ಪ್ರಕಟಗೊಂಡ ಕರ್ನಾಟಕ ತಂಡ ಆರ್. ವಿನಯ್ ಕುಮಾರ್ (ನಾಯಕ), ಮನೀಷ್ ಪಾಂಡೆ (ಉಪನಾಯಕ), ರಾಬಿನ್ ಉತ್ತಪ್ಪ, ಕೆ.ಎಲ್. ರಾಹುಲ್, ಆರ್. ಸಮರ್ಥ್, ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಉದಿತ್ ಪಟೇಲ್, ಶಿಶಿರ್ ಭಾವನೆ, ಅಬಿsಮನ್ಯು ಮಿಥುನ್, ಶ್ರೀನಾಥ್ ಅರವಿಂದ್, ಎಚ್. ಎಸ್. ಶರತ್, ಜೆ. ಸುಚಿತ್, ಕೆ.ಸಿ. ಅವಿನಾಶ್ (ವಿಕೆಟ್ ಕೀಪರ್), ಅಭಿಷೇಕ್ ರೆಡ್ಡಿ. ಬ್ಯಾಟಿಂಗ್ ಕೋಚ್- ಜೆ. ಅರುಣ್ ಕುಮಾರ್, ಬೌಲಿಂಗ್ ಕೋಚ್- ಮನ್ಸೂರ್ ಅಲಿ ಖಾನ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT