ಜಗಮೋಹನ್ ದಾಲ್ಮಿಯಾ 
ಕ್ರೀಡೆ

ಕಳಂಕ ತೊಡೆದುಹಾಕುವೆ: ದಾಲ್ಮಿಯಾ

ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದಂತೆ, ನೂತನವಾಗಿ ಬಿಸಿಸಿಐ ಅಧಿಕಾರದ ಚುಕ್ಕಾಣಿ ಹಿಡಿದಿರುವ ಜಗಮೋಹನ್ ದಾಲ್ಮಿಯಾ ಸಹ ಬಿಸಿಸಿಐ ಸ್ವಚ್ಛತೆಗೆ ಮುಂದಾಗಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದಂತೆ, ನೂತನವಾಗಿ ಬಿಸಿಸಿಐ ಅಧಿಕಾರದ ಚುಕ್ಕಾಣಿ ಹಿಡಿದಿರುವ ಜಗಮೋಹನ್ ದಾಲ್ಮಿಯಾ ಸಹ ಬಿಸಿಸಿಐ ಸ್ವಚ್ಛತೆಗೆ ಮುಂದಾಗಿದ್ದಾರೆ.

ಫಿಕ್ಸಿಂಗ್, ಬೆಟ್ಟಿಂಗ್ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ನಡೆಯಿಂದಾಗಿ ಬಿಸಿಸಿಐಗೆ ಅಂಟಿರುವ ಕಳಂಕಗಳ ಸರಮಾಲೆಯನ್ನು ತೊಡೆದುಹಾಕಿ ಬಿಸಿಸಿಐಯನ್ನು ಪರಿಶುದ್ಧಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಇತ್ತೀಚಿನ ಘಟನಾವಳಿಗಳಿಂದ ಬಿಸಿಸಿಐನ ವರ್ಚಸ್ಸಿಗೆ ಧಕ್ಕೆಯಾಗಿದ್ದು ನಿಜ. ಹಾಗಾಗಿ, ಕಳೆದುಕೊಂಡ ವರ್ಚಸ್ಸನ್ನು ಪುನರ್ ಸ್ಥಾಪಿಸುವುದೇ ನನ್ನ ಮೊದಲ ಗುರಿ. ಅಲ್ಲದೆ, ಶೀಘ್ರದಲ್ಲೇ ಆರಂಭಗೊಳ್ಳಲಿರುವ ಐಪಿಎಲ್ ಪಂದ್ಯಾವಳಿಯು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳುವುದೂ ನನ್ನ ಮತ್ತೊಂದು ಆದ್ಯತೆ' ಎಂದು ತಿಳಿಸಿದರು.

ಶುಭಾಷಯ: ಹಾಲಿ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡಕ್ಕೆ ಶುಭ ಕೋರಿದ ನೂತನ ಅಧ್ಯಕ್ಷರು, ಟೂರ್ನಿಯಲ್ಲಿ ಭಾರತ ತಂಡ ಉತ್ತಮ ಯಶಸ್ಸು ದಾಖಲಿಸಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT