ನವದೆಹಲಿ: ಅತ್ಯುತ್ತಮ ಪ್ರದರ್ಶನದ ಮೂಲಕ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಭಾರತದ ಭರವಸೆಯ ಆಟಗಾರ ಶ್ರೀಕಾಂತ್ ಗೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ರು.5 ಲಕ್ಷ ಬಹುಮಾನ ಘೋಷಿಸಿದೆ.
ಶ್ರೀಕಾಂತ್ ಅತ್ಯುತ್ತಮವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಇನ್ನು ಮುಂದೆ ಶ್ರೀಕಾಂತ್ ಮೇಲೆ ನಿರೀಕ್ಷೆ ಹೆಚ್ಚಲಿದ್ದು, ಇದೇ ತಿಂಗಳು ನಡೆಯಲಿರುವ ಇಂಡಿಯನ್ ಓಪನ್ ಟೂರ್ನಿಯಲ್ಲಿ ಪೊಡಿಯಂ ಫಿನಿಷ್ ಪಡೆಯುವ ನಿರೀಕ್ಷೆ ಇದೆ ಎಂದು ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಅಖಿಲೇಶ್ ದಾಸ್ ಗುಪ್ತಾ ತಿಳಿಸಿದ್ದಾರೆ.