ಇರಾನಿ ಕಪ್ ಎತ್ತಿ ಹಿಡಿದ ಕರ್ನಾಟಕ ತಂಡ(ಸಾಂದರ್ಭಿಕ ಚಿತ್ರ) 
ಕ್ರೀಡೆ

ರಣಜಿ ಬಳಿಕ ಇರಾನಿ ಟ್ರೋಫಿ ಗೆದ್ದ ಕರ್ನಾಟಕ ಬಾಯ್ಸ್

ರಣಜಿ ಟ್ರೋಫಿ ಗೆದ್ದು ಬೀಗಿದ್ದ ಕರ್ನಾಟಕ ತಂಡ ಇದೀಗ ಇರಾನಿ ಟ್ರೋಫಿಯನ್ನೂ ಮುಡಿಗೇರಿಸಿಕೊಂಡಿದೆ.

ಬೆಂಗಳೂರು: ರಣಜಿ ಟ್ರೋಫಿ ಗೆದ್ದು ಬೀಗಿದ್ದ ಕರ್ನಾಟಕ ತಂಡ ಇದೀಗ ಇರಾನಿ ಟ್ರೋಫಿಯನ್ನೂ ಮುಡಿಗೇರಿಸಿಕೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ಶೇಷಭಾರತವನನ್ನು 246 ರನ್ ಗಳ ಅಂತರದಿಂದ ಮಣಿಸಿ ಸತತ 2ನೇ ಬಾರಿಗೆ ಇರಾನಿ ಟ್ರೋಫಿಯನ್ನು ಮುಡಿಗೇರಿಸಿಕೊಂಡ ಸಾಧನೆ ಮಾಡಿದೆ.

2ನೇ ಇನ್ನಿಂಗ್ಸ್ ನಲ್ಲಿ 403 ರನ್ ಗಳ ಗುರಿ ಪಡೆದಿದ್ದ ಶೇಷಭಾರತ ಕರ್ನಾಟಕ ಬೌಲಿಂಗ್ ದಾಳಿ ಎದುರು ತರಗೆಲೆಯಂತೆ ಉರುಳಿತು. ತಂಡದ ಎಲ್ಲ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದರು.

ಮನೋಜ್ ತಿವಾರಿ 56 ರನ್ ಗಳಿಸಿದ್ದು ಬಿಟ್ಟರೆ ಮತ್ಯಾವ ಬ್ಯಾಟ್ಸ್ ಮನ್ ಉತ್ತಮವಾಗಿ ಆಡಲಿಲ್ಲ.  ಕೇವಲ 156 ರನ್‘ಗಳಿಗೆ ಆಲೌಟ್ ಆಗುವ ಮೂಲಕ 246 ರನ್ ಅಂತರದಿಂದ ಶೇಷಭಾರತ ಸೋಲೊಪ್ಪಿಕೊಂಡಿತು.

ಕರ್ನಾಟಕದ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ನಾಯಕ ವಿನಯ್ ಕುಮಾರ್, ಅಭಿಮನ್ಯು ಮಿಥುನ್ ಮತ್ತು ಶ್ರೇಯಸ್ ಗೋಪಾಲ್ ತಲಾ 3 ವಿಕೆಟ್ ಕಬಳಿಸಿದರು. ಅಜೇಯ 123 ರನ್ ಗಳಿಸಿದ ಮನೀಶ್ ಪಾಂಡೆ ಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್
ಕರ್ನಾಟಕ
244 ಮತ್ತು 422 ರನ್

ಶೇಷಭಾರತ
264 ಮತ್ತು 156 ರನ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT