ಮಿಸ್ಬಾ ಉಲ್ ಹಕ್-ಶಾಹಿದ್ ಅಫ್ರಿದಿ 
ಕ್ರೀಡೆ

ಏಕದಿನ ಕ್ರಿಕೆಟ್ ಗೆ ಮಿಸ್ಬಾ ಉಲ್ ಹಕ್, ಅಫ್ರಿದಿ ಗುಡ್ ಬೈ

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಮಿಸ್ಬಾ ಉಲ್ ಹಕ್ ಹಾಗೂ ಶಹೀದ್ ಅಫ್ರಿದಿ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ...

ಅಡಿಲೇಡ್: ಪಾಕಿಸ್ತಾನ ಕ್ರಿಕೆಟ್ ತಂಡದ  ನಾಯಕ ಮಿಸ್ಬಾ ಉಲ್ ಹಕ್ ಹಾಗೂ ಶಹೀದ್ ಅಫ್ರಿದಿ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಶಹೀದ್ ಅಫ್ರಿದಿ ಅವರು ವಿಶ್ವಕಪ್ ಟೂರ್ನಿಯ ನಂತರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವ ಬಗ್ಗೆ ಮೊದಲೇ ಘೋಷಿಸಿದ್ದರು. ಅದರೆ, ನಾಯಕ ಮಿಸ್ಬಾ ಉಲ್ ಹಕ್ ನಿವೃತ್ತಿ ಘೋಷಣೆ ಮಾಡಿರುವುದು ಅವರ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಕೊನೆ ಪಂದ್ಯದಲ್ಲಿ ಮಿಸ್ಬಾ ಉಲ್ ಹಕ್ 34ರನ್ ಗಳಿಸಿ ಔಟ್ ಆಗಿದ್ದರು.

162 ಏಕದಿನ ಕ್ರಿಕೆಟ್ ಪಂದ್ಯಗಳನ್ನಾಡಿರುವ 40 ವರ್ಷ ವಯಸ್ಸಿನ ಮಿಸ್ಬಾ ಉಲ್ ಹಕ್ ಅವರು ಈ ವರೆಗೂ ಒಂದೇ ಒಂದು ಶತಕ ಸಿಡಿಸಿಲ್ಲ. ಇದರ ಹೊರತಾಗಿಯೂ ನಿವೃತ್ತಿ ಘೋಷಣೆ ಮಾಡಿರುವುದು ಅಭಿಮಾನಿಗಳಿಗೆ ಇನ್ನೂ ಬೇಸರ ತರಿಸಿದೆ. ಏಕದಿನ ಕ್ರಿಕೆಟ್ ನಲ್ಲಿ ಒಟ್ಟು 42 ಅರ್ಧಶತಕ ಬಾರಿಸಿರುವ ಮಿಸ್ಬಾ ಉಲ್ ಹಕ್ ಅವರು 5,122 ರನ್ ಗಳಿಸಿದ್ದಾರೆ. ಶತಕ ಬಾರಿಸದೆ 5,000 ಪ್ಲಸ್ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. 2001ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಮಿಸ್ಬಾ ಕಾಲಿಟ್ಟರು.

35 ವರ್ಷ ವಯಸ್ಸಿನ ಆಲ್ ರೌಂಡರ್ ಅಫ್ರಿದಿ ಅವರು 398 ಏಕದಿನ ಪಂದ್ಯಗಳನ್ನಾಡಿದ್ದು, ಒಟ್ಟು 8,064 ರನ್ ಗಳಿಸಿದ್ದಾರೆ. ಅಲ್ಲದೆ ಪ್ರಮುಖ ಸ್ಪಿನ್ನರ್ ಆಗಿಯೂ ಗುರುತಿಸಿಕೊಂಡಿದ್ದ ಅವರು 395 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಇವಿಷ್ಟೇ ಅಲ್ಲದೆ ಸ್ವತಃ ಪಾಕಿಸ್ತಾನ ತಂಡದ ನಾಯಕರಾಗಿದ್ದ ಅವರು 2011ರ ವಿಶ್ವಕಪ್ ನಲ್ಲಿ ತಂಡವನ್ನು ಮುನ್ನಡೆಸಿದ್ದರು. ಮೊಹಾಲಿಯಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಚಾಂಪಿಯನ್ ಟೀಂ ಇಂಡಿಯಾ ವಿರುದ್ಧ ಅಫ್ರಿದಿ ಪಡೆ ಸೋಲು ಕಂಡಿತ್ತು.

ಮಿಸ್ಬಾ ಉಲ್ ಹಕ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದು, ಅಫ್ರಿದಿ ಅವರು ಟಿ20 ಕ್ರಿಕೆಟ್ ನಲ್ಲಿ ಆಡಲಿದ್ದಾರೆ. 1996ರಲ್ಲಿ ಶ್ರೀಲಂಕಾ ವಿರುದ್ಧ 37 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತಿ ವೇಗದ ಶತಕ ಸಾಧನೆ ಮಾಡಿದ ಆಟಗಾರ ಎಂಬ ಕೀರ್ತಿಗೆ ಅಫ್ರಿದಿ ಭಾಜನರಾಗಿದ್ದರು. ಕ್ರಿಕೆಟ್ ಜಗತ್ತಿನಲ್ಲಿ  'ಬೂಮ್ ಬೂಮ್ ಅಫ್ರಿದಿ' ಎಂದೇ ಖ್ಯಾತಿ ಪಡೆದಿದ್ದ ಅಫ್ರಿದಿ ಅವರ ಅನೇಕ ಏಕದಿನ ಇನ್ನಿಂಗ್ಸ್ ಗಳನ್ನು ಕ್ರೀಡಾಭಿಮಾನಿಗಳ ಮೆಚ್ಚುಗೆ ಪಡೆದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT