ಬಾಸ್ಕೆಟ್‌ಬಾಲ್ ಫೆಡರೇಷನ್‌ 
ಕ್ರೀಡೆ

ಬಾಸ್ಕೆಟ್‌ಬಾಲ್ ಫೆಡರೇಷನ್‌ನಲ್ಲಿ ಭಿನ್ನಾಭಿಪ್ರಾಯ ಸ್ಫೋಟ

ಬೆಂಗಳೂರು: ಭಾರತೀಯ ಬಾಸ್ಕೆಟ್‌ಬಾಲ್ ಫೆಡರೇಷನ್(ಬಿಎಫ್‌ಐ)ನ ಪ್ರಧಾನ ಕಾರ್ಯದರ್ಶಿ ಅಜಯ್ ಸುದ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ, ವಾರ್ಷಿಕ ಸಾಮಾನ್ಯ ಸಭೆ(ಎಜಿಎಂ)ಯಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ.

ಬಿಎಫ್‌ಐನಲ್ಲಿನ ಭಿನ್ನಾಭಿಪ್ರಾಯ ಹಾಗೂ ಬಣಗಳ ನಡುವಿನ ಕಿತ್ತಾಟದ ಹಿನ್ನೆಲೆಯಲ್ಲಿ ಸುದ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ವಾರ್ಷಿಕ ಸಾಮಾನ್ಯ ಸಭೆಗೆ ಕೇವಲು 10 ದಿನ ಬಾಕಿ ಇರುವಾಗಲೇ ಬಿಎಫ್‌ಐನಲ್ಲಿ ಮತ್ತೆ ಭಿನ್ನಾಭಿಪ್ರಾ ಸ್ಫೋಟಗೊಂಡಿದೆ.

ವಾರ್ಷಿಕ ಸಾಮಾನ್ಯ ಸಭೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೊರಡಿಸಲಾಗಿದ್ದು, ಒಂದರಲ್ಲಿ ಇದೇ ಮಾರ್ಚ್ 27ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿದೆ. ಮತ್ತೊಂದರಲ್ಲಿ ಮಾರ್ಚ್ 28ರಂದು ಫೆಡರೇಷನ್ ಕಪ್ ಸಮಯದಲ್ಲಿ ಪುಣೆಯಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.

2011ರ ವರೆಗೂ ದಿ.ಹರಿಶ್ ಶರ್ಮಾ ಅವರು ಫೆಡರೇಷನ್ ಕಾರ್ಯದರ್ಶಿಯಾಗಿದ್ದರು. ಆದರೆ ಅವರಿಗೆ ಬಿಎಫ್‌ಐ ಸಿಇಒ ಸ್ಥಾನವನ್ನು ಸೃಷ್ಠಿ ಮಾಡಿತ್ತು. ಇದು ಸರ್ಕಾರದ ಕ್ರೀಡಾ ನೀತಿಯ ಸ್ಪಷ್ಟ ಉಲ್ಲಂಘನೆಯಾಗಿತ್ತು. ನಿಯಮಗಳ ಪ್ರಕಾರ, ಪದಾಧಿಕಾರಿಗಳು ಗರಿಷ್ಠ ಎಂಟು ವರ್ಷಗಳ ಕಾಲ ಅಧಿಕಾರಿದಲ್ಲಿಬರುದು ಮತ್ತು ಸಿಇಒ ಫೆಡರೇಷನ್ ಅಧ್ಯಕ್ಷ ಆರ್ ಗಿಲ್ ಅವರಿಗೆ ಉತ್ತರದಾಯಿಯಾಗಿರಲಿಲ್ಲ.

2012ರಲ್ಲಿ ಶರ್ಮಾ ಸಾವಿನ ನಂತರ ಅವರ ಪತ್ನಿ ರೂಪಮ್ ಶರ್ಮಾ ಅವರು ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದು, ಆ ಸ್ಥಾನವನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ ಈಗ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಿ ಅವರಿಗೆ ವಾರ್ಷಿಕ ಸಾಮನ್ಯ ಸಭೆಯ ಕಾರ್ಯದರ್ಶಿಯನ್ನಾಗಿ ಮಾಡಲು ಪಿಎಫ್‌ಐ ಮುಂದಾಗಿದೆ. ಇದಕ್ಕೆ ರೂಪಮ್ ಶರ್ಮಾ ಅವರು ಒಪ್ಪುತ್ತಿಲ್ಲ. ಅಲ್ಲದೆ ಹಿರಿಯ ಉಪಾಧ್ಯಕ್ಷ ಕರ್ನಾಟಕದ ಕೆ.ಗೋವಿಂದರಾಜ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಈಗಾಗಲೇ ಮೂರು ಅವಧಿಗೆ ಅಧ್ಯಕ್ಷರಾಗಿರುವ ಆರ್‌ಎಸ್ ಗಿಲ್ ಅವರು ಅಧಿಕಾರದಿಂದ ಕೆಳಗಿಳಿಯಬೇಕು ಎಂಬ ಕೂಗು ಕೇಳಿ ಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!