ಉಮೇಶ್ ಯಾದವ್ 
ಕ್ರೀಡೆ

ಡೇವಿಡ್ ವಾರ್ನರ್ ವಿಕೆಟ್ ಮಹತ್ವದ್ದಾಗಿತ್ತು: ಉಮೇಶ್

ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಪಂದ್ಯಶ್ರೇಷ್ಠ ಗೌರವ..

ಕೋಲ್ಕತಾ: ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಪಂದ್ಯಶ್ರೇಷ್ಠ ಗೌರವ ಸಂಪಾದಿಸಿದ ವೇಗಿ ಉಮೇಶ್ ಯಾದವ್, ತಮ್ಮ ಪ್ರದರ್ಶನದಿಂದ ತೃಪ್ತರಾಗಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಅವರು, ಸನ್‍ರೈಸರ್ಸ್‍ನ ಆರಂಭಿಕ ಬ್ಯಾಟ್ಸ್‍ಮನ್ ಹಾಗೂ ನಾಯಕ ಡೇವಿಡ್ ವಾರ್ನರ್ ಅವರ ವಿಕೆಟ್ ನಮ್ಮ ಪಾಲಿಗೆ ಮಹತ್ವದ್ದಾಗಿತ್ತು. ಅವರನ್ನು ಬೇಗನೆ ಔಟ್ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಹೇಳಿದ್ದಾರೆ. ಇನಿಂಗ್ಸ್ ನ ಮೊದಲ ಓವರ್ ಎಸೆದಿದ್ದ ಉಮೇಶ್ ಯಾದವ್, ಮೂರನೇ ಎಸೆತದಲ್ಲಿಯೇ ವಾರ್ನರ್ ಅವರನ್ನು ಬೌಲ್ಡ್ ಮಾಡಿದ್ದರು. ಅಷ್ಟೇ ಅಲ್ಲದೇ, ಇದೇ ಓವರಿನ ಕೊನೆಯ ಎಸೆತದಲ್ಲಿ ವಿಕೆಟ್ ಕೀಪರ್ ನಮನ್ ಓಜಾರ ವಿಕೆಟ್ ಪಡೆಯುವಲ್ಲಿಯೂ ಅವರು ಯಶಸ್ವಿಯಾಗಿದ್ದರು. ಮೊದಲ ಓವರಿನಲ್ಲಿಯೇ ಉಮೇಶ್ 2 ವಿಕೆಟ್ ಉರುಳಿಸಿದ್ದರಿಂದ ಎದುರಾಳಿ ಮೇಲೆ ಒತ್ತಡ ಹೆಚ್ಚಾಗಿ, ಅಬ್ಬರಿಸುವುದು ಕಷ್ಟವಾಗಿತ್ತು. ಮತ್ತೊಂದೆಡೆ ಶುರುವಿನಲ್ಲಿಯೇ ದೊರೆತ ಎರಡು ಸಫಲತೆಗಳು ಕೋಲ್ಕತಾ ತಂಡದ ಕೈ ಮೇಲಾಗುವಂತೆ ಮಾಡಿತ್ತು. ವಾರ್ನರ್ ಅವರನ್ನು ಬೇಗನೆ ಔಟ್ ಮಾಡುವುದು ನಮ್ಮ

ಉದ್ದೇಶವಾಗಿತ್ತು. ಅದಕ್ಕಾಗಿಯೇ ಯೋಜನೆ ರೂಪಿಸಿಕೊಂಡಿದ್ದೆವು. ಬಹುಬೇಗನೆ ಅದಕ್ಕೆ ತಕ್ಕ ಫಲ ದೊರೆತಿದ್ದಕ್ಕೆ ಖುಷಿಯಾಯಿತು ಎಂದಿರುವ ಉಮೇಶ್, ದೈಹಿಕ ಸಕ್ಷಮತೆ
ಕಾಪಾಡಿಕೊಳ್ಳುವಲ್ಲಿ ಮತ್ತು ಯೋಜನೆ ರೂಪಿಸಿದಂತೆ ದಾಳಿ ಮಾಡುವಲ್ಲಿ ಯಶಸ್ವಿಯಾಗಲು ಪ್ರಯತ್ನಿಸುತ್ತಿದ್ದು, ಅದರಿಂದ ಉತ್ತಮ ಬೌಲರ್ ಆಗಿ ರೂಪುಗೊಳ್ಳಬಹುದು ಎಂದರು. ನಾಯಕ ಗೌತಮ್ ಗಂಭೀರ್ ಸಹ ಉಮೇಶ್ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸನ್‍ರೈಸರ್ಸ್ ವಿರುದ್ಧ ಗೆಲವು ದಾಖಲಿಸಲು ಅವರೇ ಕಾರಣರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT