ಉಮೇಶ್ ಯಾದವ್ 
ಕ್ರೀಡೆ

ಡೇವಿಡ್ ವಾರ್ನರ್ ವಿಕೆಟ್ ಮಹತ್ವದ್ದಾಗಿತ್ತು: ಉಮೇಶ್

ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಪಂದ್ಯಶ್ರೇಷ್ಠ ಗೌರವ..

ಕೋಲ್ಕತಾ: ಸನ್‍ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿ, ಪಂದ್ಯಶ್ರೇಷ್ಠ ಗೌರವ ಸಂಪಾದಿಸಿದ ವೇಗಿ ಉಮೇಶ್ ಯಾದವ್, ತಮ್ಮ ಪ್ರದರ್ಶನದಿಂದ ತೃಪ್ತರಾಗಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಅವರು, ಸನ್‍ರೈಸರ್ಸ್‍ನ ಆರಂಭಿಕ ಬ್ಯಾಟ್ಸ್‍ಮನ್ ಹಾಗೂ ನಾಯಕ ಡೇವಿಡ್ ವಾರ್ನರ್ ಅವರ ವಿಕೆಟ್ ನಮ್ಮ ಪಾಲಿಗೆ ಮಹತ್ವದ್ದಾಗಿತ್ತು. ಅವರನ್ನು ಬೇಗನೆ ಔಟ್ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಹೇಳಿದ್ದಾರೆ. ಇನಿಂಗ್ಸ್ ನ ಮೊದಲ ಓವರ್ ಎಸೆದಿದ್ದ ಉಮೇಶ್ ಯಾದವ್, ಮೂರನೇ ಎಸೆತದಲ್ಲಿಯೇ ವಾರ್ನರ್ ಅವರನ್ನು ಬೌಲ್ಡ್ ಮಾಡಿದ್ದರು. ಅಷ್ಟೇ ಅಲ್ಲದೇ, ಇದೇ ಓವರಿನ ಕೊನೆಯ ಎಸೆತದಲ್ಲಿ ವಿಕೆಟ್ ಕೀಪರ್ ನಮನ್ ಓಜಾರ ವಿಕೆಟ್ ಪಡೆಯುವಲ್ಲಿಯೂ ಅವರು ಯಶಸ್ವಿಯಾಗಿದ್ದರು. ಮೊದಲ ಓವರಿನಲ್ಲಿಯೇ ಉಮೇಶ್ 2 ವಿಕೆಟ್ ಉರುಳಿಸಿದ್ದರಿಂದ ಎದುರಾಳಿ ಮೇಲೆ ಒತ್ತಡ ಹೆಚ್ಚಾಗಿ, ಅಬ್ಬರಿಸುವುದು ಕಷ್ಟವಾಗಿತ್ತು. ಮತ್ತೊಂದೆಡೆ ಶುರುವಿನಲ್ಲಿಯೇ ದೊರೆತ ಎರಡು ಸಫಲತೆಗಳು ಕೋಲ್ಕತಾ ತಂಡದ ಕೈ ಮೇಲಾಗುವಂತೆ ಮಾಡಿತ್ತು. ವಾರ್ನರ್ ಅವರನ್ನು ಬೇಗನೆ ಔಟ್ ಮಾಡುವುದು ನಮ್ಮ

ಉದ್ದೇಶವಾಗಿತ್ತು. ಅದಕ್ಕಾಗಿಯೇ ಯೋಜನೆ ರೂಪಿಸಿಕೊಂಡಿದ್ದೆವು. ಬಹುಬೇಗನೆ ಅದಕ್ಕೆ ತಕ್ಕ ಫಲ ದೊರೆತಿದ್ದಕ್ಕೆ ಖುಷಿಯಾಯಿತು ಎಂದಿರುವ ಉಮೇಶ್, ದೈಹಿಕ ಸಕ್ಷಮತೆ
ಕಾಪಾಡಿಕೊಳ್ಳುವಲ್ಲಿ ಮತ್ತು ಯೋಜನೆ ರೂಪಿಸಿದಂತೆ ದಾಳಿ ಮಾಡುವಲ್ಲಿ ಯಶಸ್ವಿಯಾಗಲು ಪ್ರಯತ್ನಿಸುತ್ತಿದ್ದು, ಅದರಿಂದ ಉತ್ತಮ ಬೌಲರ್ ಆಗಿ ರೂಪುಗೊಳ್ಳಬಹುದು ಎಂದರು. ನಾಯಕ ಗೌತಮ್ ಗಂಭೀರ್ ಸಹ ಉಮೇಶ್ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸನ್‍ರೈಸರ್ಸ್ ವಿರುದ್ಧ ಗೆಲವು ದಾಖಲಿಸಲು ಅವರೇ ಕಾರಣರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT