ಸಾನಿಯಾ ಮಿರ್ಜಾ, ಮಾರ್ಟಿನಾ ಹಿಂಗಿಸ್ 
ಕ್ರೀಡೆ

ಸಾನಿಯಾ ಕ್ವಾರ್ಟರ್‍ಗೆ, ಮಹೇಶ್ ಭೂಪತಿ ಹೊರಕ್ಕೆ

ಭಾರತದ ಸಾನಿಯಾ ಮಿರ್ಜಾ ಮತ್ತು ಸ್ವಿಜರ್‍ಲೆಂಡ್‍ನ ಮಾರ್ಟಿನಾ ಹಿಂಗಿಸ್ ಅವರು ಮ್ಯಾಡ್ರಿಡ್ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ...

ಮಾಯಡ್ರಿಡ್(ಸ್ಪೇನ್): ಭಾರತದ ಸಾನಿಯಾ ಮಿರ್ಜಾ ಮತ್ತು ಸ್ವಿಜರ್‍ಲೆಂಡ್‍ನ ಮಾರ್ಟಿನಾ ಹಿಂಗಿಸ್ ಅವರು ಮ್ಯಾಡ್ರಿಡ್ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಆದರೆ, ಇದೇ ಟೂರ್ನಿಯ ಪುರುಷರ ವಿಭಾಗದಲ್ಲಿ ಪಾಲ್ಗೊಂಡಿದ್ದ ಭಾರತದ ಮತ್ತೊಬ್ಬ ಸ್ಪರ್ಧಿ ಮಹೇಶ್ ಭೂಪತಿ ಸೋಲಿನ ಕಹಿ ಅನುಭವಿಸಿದ್ದಾರೆ. ಅಗ್ರಶ್ರೇಯಾಂಕಿತ ಜೋಡಿಯಾಗಿರುವ
ಸಾನಿಯಾ ಮತ್ತು ಹಿಂಗಿಸ್, ಎರಡನೇ ಸುತ್ತಿನ ಪಂದ್ಯದಲ್ಲಿ ಸ್ಲೊವಾಕಿಯಾದ ಜನೆಟೆ ಹುಸರೊವಾ ಮತ್ತು ರೊಮೇನಿಯಾದ ರಾಲುಕಾ ಓಲಾರು ವಿರುದ್ಧ 6-2, 6-3 ನೇರ ಸೆಟ್‍ಗಳಿಂದ ಸುಲಭ ಜಯ ದಾಖಲಿಸಿದರು.

ಒಂದು ಗಂಟೆ ಆಟದಲ್ಲೇ ಎದುರಾಳಿ ಜೋಡಿಗೆ ಆಘಾತ ನೀಡುವಲ್ಲಿ ಯಶಸ್ವಿಯಾದ ಭಾರತ -ಸ್ವಿಸ್ ಜೋಡಿಯು ಪಂದ್ಯದುದ್ದಕ್ಕೂ ಉತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿ ಗಮನ ಸೆಳೆಯಿತು. ಸಾನಿಯಾ ಮತ್ತು ಹಿಂಗಿಸ್, ಎಂಟರ ಘಟ್ಟದ ಪಂದ್ಯದಲ್ಲಿ ಏಳನೇ ಶ್ರೇಯಾಂಕಿತ ಜೋಡಿಯಾದ ಅಮೆರಿಕದ ಬೆಥಾನಿ ಮಾಟೆಕ್ ಸ್ಯಾಂಡ್ಸ್ ಮತ್ತು ಜೆಕ್ ಗಣರಾಜ್ಯದ ಲೂಸಿ ಸಫರೊವಾ ಅವರನ್ನು ಎದುರಿಸಲಿದ್ದಾರೆ.

ಭೂಪತಿ-ನಿಕ್‍ಗೆ ಸೋಲು
ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಮಹೇಶ್ ಭೂಪತಿ ಮತ್ತು ಆಸ್ಟ್ರಿಯಾದ ನಿಕ್ ಕಿರ್ಗಿಯೊಸ್ ಮೊದಲ ಸುತ್ತಿನ ಸಮರದಲ್ಲೇ ಆಘಾತ ಅನುಭವಿಸಿದರು. ದಕ್ಷಿಣ ಆಫ್ರಿಕಾದ
ಕೆವಿನ್ ಆ್ಯಂಡರ್ಸನ್ ಮತ್ತು ಫ್ರಾನ್ಸ್ ನ ಜೆರೆಮಿ ಚಾರ್ಡಿ ಅವರು 7-5, 6-3 ನೇರ ಸೆಟ್ ಗಳಿಂದ ಭೂಪತಿ-ನಿಕ್ ಅವರಿಗೆ ಸೋಲುಣಿಸಿ ಮುನ್ನಡೆಯಿತು.

ಸುಮಾರು ಒಂದೂವರೆ ಗಂಟೆ ಆಟದಲ್ಲಿ ಭೂಪತಿ ಮತ್ತು ನಿಕ್ ಮೊದಲ ಸೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಎದುರಾಳಿ ಆಟಗಾರರ ಮುಂದೆ ಕಠಿಣ ಸವಾಲು ನಿಲ್ಲಿಸಿದರು. ಆದರೆ, ಆ್ಯಂಡರ್ಸನ್ ಮತ್ತು ಜೆರೆಮಿ ಆತ್ಮವಿಶ್ವಾಸದಿಂದ ಹೋರಾಟ ನಡೆಸುವ ಮೂಲಕ ತಮಗೆ ಎದುರಾದ ಅಡೆ-ತಡೆಗಳನ್ನು ಮೆಟ್ಟಿನಿಲ್ಲಲು ಯಶಸ್ವಿಯಾದರು. ಎರಡನೇ ಸೆಟ್‍ನಲ್ಲಿ ಇದೇ ಸ್ಫೂರ್ತಿಯಲ್ಲಿ ಮುನ್ನುಗ್ಗುವ ಮೂಲಕ ಅಂತಿಮ ಗೆಲವು ತಮ್ಮದಾಗಿಸಿಕೊಂಡು ಎರಡನೇ ಸುತ್ತಿಗೆ ಹೆಜ್ಜೆ ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT