ವಿಕಾಸ್ ಗೌಡ 
ಕ್ರೀಡೆ

ಖೇಲ್ ರತ್ನಕ್ಕೆ ವಿಕಾಸ್, ಗಿರೀಶ್ ಹೆಸರು ಶಿಫಾರಸು

ರಾಜ್ಯದ ಕ್ರೀಡಾಳುಗಳಾದ ವಿಕಾಸ್ ಗೌಡ (ಡಿಸ್ಕಸ್ ತ್ರೋ) ಹಾಗೂ ಎಚ್.ಎನ್. ಗಿರೀಶ (ಪ್ಯಾರಾ ಅಥ್ಲೆಟಿಕ್ಸ್) ಅವರಿಗೆ ಪ್ರತಿಷ್ಠಿತ ರಾಜೀವ್ ಗಾಂಧಿ...

ನವದೆಹಲಿ: ರಾಜ್ಯದ ಕ್ರೀಡಾಳುಗಳಾದ ವಿಕಾಸ್ ಗೌಡ (ಡಿಸ್ಕಸ್ ತ್ರೋ) ಹಾಗೂ ಎಚ್.ಎನ್.
ಗಿರೀಶ (ಪ್ಯಾರಾ ಅಥ್ಲೆಟಿಕ್ಸ್) ಅವರಿಗೆ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡುವಂತೆ ಭಾರತೀಯ ಅಥ್ಲೆಟಿಕ್ಸ್ ಒಕ್ಕೂಟ (ಎಎಫ್ಐ) ಕೇಂದ್ರ ಕ್ರೀಡಾ ಇಲಾಖೆಗೆ ಶಿಫಾರಸು ಮಾಡಿದೆ.

ಅಲ್ಲದೆ, ಕನ್ನಡದ ಓಟಗಾರ್ತಿ ಎಂ.ಆರ್. ಪೂವಮ್ಮ ಅವರಿಗೆ ಅರ್ಜುನ ಪ್ರಶಸ್ತಿ ನೀಡುವಂತೆ ಅದು ಸಚಿವಾಲಯವನ್ನು ಕೋರಿದೆ. ಪೂವಮ್ಮ ಜೊತೆಗೆ ಟ್ರಿಪಲ್ ಜಂಪರ್ ಅರ್ಪಿಂದರ್ ಸಿಂಗ್, ಓಟಗಾರ್ತಿ ಒ.ಪಿ. ಜೈಶಾ ಹಾಗೂ ಸೀಮಾ ಅವರಿಗೂ ಅರ್ಜುನ ಪ್ರಶಸ್ತಿ ನೀಡುವಂತೆ ಕೇಂದ್ರವನ್ನು ಎಎಫ್ಐ ಕೇಳಿಕೊಂಡಿದೆ.

ಪ್ಯಾರಾ ಅಥ್ಲೆಟಿಕ್ಸ್ ವಿಭಾಗದಲ್ಲಿ ಎಚ್.ಎನ್. ಗಿರೀಶ ಜೊತೆಗೆ, ದೇವೇಂದ್ರ ಝಝಾರಿಯಾ ಅವರಿಗೂ ಖೇಲ್ ರತ್ನ ಪಶಸ್ತಿಗಾಗಿ ಶಿಫಾರಸು ಮಾಡಲಾಗಿದೆ. ಇದರ ಜೊತೆಗೆ, ಮಹಿಳೆಯ ಡಿಸ್ಕರ್ ತ್ರೋ ವಿಭಾಗದಲ್ಲಿ ಗಣನೀಯ ಸಾಧನೆ ಮಾಡಿರುವ ಸೀಮಾ ಪೂನಿಯಾ ಅವರಿಗೂ ಖೇಲ್ ರತ್ನ ನೀಡುವಂತೆ ಶಿಫಾರಸು ಮಾಡಲಾಗಿದೆ. 2014ರ ಏಷ್ಯನ್ ಕ್ರೀಡಾಕೂಟದಲ್ಲಿ ಸೀಮಾ ಅವರು ಚಿನ್ನದ ಪದಕ ಗೆದ್ದಿದ್ದರು.

ವಿಕಾಸ್ ಅವರು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದರಲ್ಲದೆ, 2014ರ ಇಂಚಿಯಾನ್ ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿಯ ಗೌರವ ಪಡೆದಿದ್ದರು. ಮಹಿಳೆಯರ ಡಿಸ್ಕಸ್ ತ್ರೋ ವಿಭಾಗದಲ್ಲಿ ಗಣನೀಯ ಸಾಧನೆ ಮಾಡಿರುವ ಸೀಮಾ ಪೂನಿಯಾ ಅವರಿಗೂ ಖೇಲ್ ರತ್ನ ನೀಡುವಂತೆ ಶಿಫಾರಸು ಮಾಡಲಾಗಿದೆ. ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಸೀಮಾ, ಬೆಳ್ಳಿ ಪದಕದ ಗೌರವ ತಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT