ಸಂಸತ್ 
ಕ್ರೀಡೆ

ಕ್ರೀಡಾಳು ಸಾವು: ಸಂಸತ್ ನಲ್ಲಿ ಪ್ರತಿಧ್ವನಿ

ಕೇರಳದ ಅಲೆಪ್ಪಿಯ ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ತರಬೇತಿ ಕೇಂದ್ರದಲ್ಲಿ ಮಹಿಳಾ ಯುವ ಕ್ರೀಡಾಳು ಆತ್ಮಹತ್ಯೆ ಮಾಡಿಕೊಂಡ

ನವದೆಹಲಿ: ಕೇರಳದ ಅಲೆಪ್ಪಿಯ ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ತರಬೇತಿ ಕೇಂದ್ರದಲ್ಲಿ ಮಹಿಳಾ ಯುವ ಕ್ರೀಡಾಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಸತ್ ನಲ್ಲಿ ಪ್ರತಿಧ್ವನಿಸಿತು.
ಸಾಯ್ ನ ಮಹಾ ನಿರ್ದೇಶಕರನ್ನು  ಹುದ್ದೆಯಿಂದ ತೆಗೆದುಹಾಕಬೇಕು ಹಾಗೂ ತರಬೇತಿ ಕೇಂದ್ರಗಳಲ್ಲಿ ಮಹಿಳಾ ಸುರಕ್ಷತೆಗೆ ಅನುಕೂಲವಾಹುವಂತ ಕಠಿಣ ಕಾನೂನನ್ನು ಜಾರಿಗೊಳಿಸಬೇಕೆಂದು ಸಂಸದರು ಸರ್ಕಾರವನ್ನು ಒತ್ತಾಯಿಸಿದರು.
ಲೋಕಸಭೆಯಲ್ಲಿ ಈ ಬಗ್ಗೆ ದನಿ ಎತ್ತಿದ ಬಿಜೆಪಿಯ ಪ್ರಹ್ಲಾದ್ ಪಟೇಲ್ ಕ್ರೀಡಾ ತರಬೇತಿ ಕೇಂದ್ರಗಳಲ್ಲಿ ಇರುವ ಸರ್ವಾಧಿಕಾರಿ ವ್ಯವಸ್ಥೆ ಬಗ್ಗೆ ಗಮನ ಹರಿಸಬೇಕು. ಹಾಗೂ ವಿದ್ಯಾರ್ಥಿಗಳು ನಿರುಮ್ಮಳವಾಗಿ ತರಬೇತಿ ಪಡೆಯುವಂತೆ ಕಾನೂನು ರೂಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನ ಪ್ರಮೋದ್ ತಿವಾರಿ, ರಾಜೀವ್ ಶುಕ್ಲಾ, ಮಾಜಿ ಕೇಂದ್ರ ಸಚಿವ ಎ.ಕೆ ಆ್ಯಂಟನಿ ಇದಕ್ಕೆ ದನಿಗೂಡಿಸಿದರು.
ಬುಧವಾರ ಅಲೆಪ್ಪಿಯ ಸಾಯ್ ಕೇಂದ್ರದಲ್ಲಿ ನಾಲ್ವರು ಬಾಲಕಿಯರು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಅಪರ್ಣಾ ಎಂಬ ಅಥ್ಲೀಟ್ ಸಾವನ್ನಪ್ಪಿದ್ದಳು.
ಚೇತರಿಕೆ: ಇತರ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮೂವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.
5 ಲಕ್ಷ ಪರಿಹಾರ: ಅಲೆಪ್ಪಿಯ ಸಾಯ್ ಕೇಂದ್ರದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡ ಯುವ ಕ್ರೀಡಾಳು ಕುಟುಂಬಕ್ಕೆ ಸಾಯ್ ವತಿಯಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಶುಕ್ರವಾರ ಅಪರ್ಣಾ ಮನೆಗೆ ಭೇಟಿ ನೀಡಿದ ಸಾಯ್ ನಿರ್ದೇಶಕ ಇಂಜೆಟಿಶ್ರೀನಿವಾಸ್ ಕುಟುಂಬ ಸದಸ್ಯರಿಗೆ ಪರಿಹಾರದ ಚೆಕ್ ವಿತರಿಸಿದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT