ಕೇದಾರ್ ಜಾದವ್ 
ಕ್ರೀಡೆ

ವ್ಯರ್ಥವಾದ ಜಾದವ್ ಆಟ

ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ನಂತರ ಖಿಂಟಾನ್ ಡಿಕಾಕ್ (50) ಮತ್ತು ಕೇದಾರ್ ಜಾದವ್ (ಅಜೇಯ 63) ಆಕರ್ಷಕ ಬ್ಯಾಟಿಂಗ್ ಹೊರತಾಗಿಯೂ....

ರಾಯ್ ಪುರ: ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ನಂತರ ಖಿಂಟಾನ್ ಡಿಕಾಕ್ (50) ಮತ್ತು ಕೇದಾರ್ ಜಾದವ್ (ಅಜೇಯ 63) ಆಕರ್ಷಕ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಡೇವಿಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ರನ್ ಗಳಿಂದ ಸೋಲು ಅನುಭವಿಸಿದೆ.
ಶನಿವಾರ ನಡೆದ ಪಂದ್ಯದಲ್ಲ ಟಾಸ್ ಗೆದ್ದ ಸನ್ ರೈಸರ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 20 ಓವರ್ ಗಳಲ್ಲಿ 4 ವಿಕೆಟ್ ಗೆ 163 ರನ್ ದಾಖಲಿಸಿತು.  ಈ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಸೋಲಿನಿಂದ ಡೆವಿಲ್ಸ್ ಪಡೆ ಟೂರ್ನಿಯಿಂದ ಹೊರ ಬಿದ್ದಂತಾಗಿದೆ.
ಆಸರೆಯಾದ ಹೆನ್ರಿಕ್ಸ್ : ಮೊದಲು ಬ್ಯಾಟಿಂಗ್ ಮಾಡಲಿಳಿದ ಸನ್ ರೈಸರ್ಸ್ ಉತ್ತಮ ಆರಂಭ ಪಡೆಯಲಿಲ್ಲ. ಮೂರನೇ ಕ್ರಮಾಂಕದಲ್ಲಿ ಬಂದ ಮೊಯ್ಸಿಸ್ ಹೆನ್ರಿಕ್ ಇನ್ನಿಂಗ್ಸ್ ಕಟ್ಟುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸದರು. ಹೆನ್ರಿಕ್ಸ್ 46 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ ಅಜೇಯ 74 ರನ್ ದಾಖಲಿಸಿದರು. ಈ ಮೂಲಕ ತಂಡ ಪೈಪೋಟಿ ಮೊತ್ತ ಕಲೆ ಹಾಕಿತು.
ಜಾಧವ್ ಹೋರಾಟ ವ್ಯರ್ಥ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಡೆವಿಲ್ಸ್ ಆರಂಭದಲ್ಲಿ ಖಿಂಟಾನ್ ಡಿ ಕಾಕ್ ಅವರ ಅರ್ಧ ಶತಕದ ಹೊರತಾಗಿಯೂ ಕುಸಿತ ಕಂಡಿತು.
ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ನಿರ್ಗಮಿಸಿದರು. ಕಾಕ್ ವಿಕೆಟ್ ಬಿದ್ದ ಬೆನ್ನಲ್ಲೇ ಡುಮಿನಿ 12, ಯುವರಾಜ್ 2ರನ್ ಗಳಿಸಿ, ಔಟಾಗಿದ್ದು ತಂಡದ ಹಿನ್ನೆಡೆಗೆ ಕಾರಣವಾಯಿತು. 5ನೇ ವಿಕೆಟ್ ಜತೆಯಾದ ಕೇದಾರ್ ಜಾದವ್ ಹಾಗೂ ಸೌರಭ್ ತಿವಾರಿ 91 ರನ್ ಜೊತೆಯಾಟವಾಡಿ ತಂಡವನ್ನು ಗೆಲುವಿನತ್ತ ಕರೆದೊಯ್ಯುವ ಪ್ರಯತ್ನ ನಡೆಸಿದರಾದ್ರೂ ಯಶಸ್ವಿಯಾಗಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ