ಮಾಜಿ ಕ್ರಿಕೆಟಿಗರು 
ಕ್ರೀಡೆ

ತೆಂಡೂಲ್ಕರ್, ದ್ರಾವಿಡ್, ಗಂಗೂಲಿ, ಲಕ್ಷ್ಮಣ್ ಗೆ ರು. 1.5 ಕೋಟಿ

ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ತಲಾ ರು.1.5 ಕೋಟಿ ನೀಡಲು ಬಿಸಿಸಿಐ ನಿರ್ಧರಿಸಿದೆ...

ಮುಂಬೈ: ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ತಲಾ ರು.1.5 ಕೋಟಿ ನೀಡಲು ಬಿಸಿಸಿಐ ನಿರ್ಧರಿಸಿದೆ.

ಭಾರತೀಯ ಕ್ರಿಕೆಟ್ ಸಂಸ್ಥೆ (ಬಿಸಿಸಿಐ) ಜಾರಿಗೊಳಿಸಿರುವ `ಒಂದು ಬಾರಿ ಪಾವತಿ' ಯೋಜನೆಯಡಿ ಈ ಹಣವನ್ನು ನೀಡಲು ಶುಕ್ರವಾರ ನಡೆದ ಬಿಸಿಸಿಐ ಆರ್ಥಿಕ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಖಾಸಗಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಇನ್ನಿತರ ತೀರ್ಮಾನಗಳು ಸಂಭಾವನೆ ವಿಚಾರದಲ್ಲಿ ಟೀಂ ಇಂಡಿಯಾದಲ್ಲಿ ಅಳವಡಿಸಲಾಗಿರುವ ಆಟಗಾರರ ಶ್ರೇಣೀಕೃತ ವ್ಯವಸ್ಥೆಯನ್ನು ಭಾರತ ಮಹಿಳೆಯರ ತಂಡಕ್ಕೂ ಅಳವಡಿಸಲು ತೀರ್ಮಾನಿಸಲಾಯಿತು.

ಕಳೆದೆರಡು ವರ್ಷಗಳಲ್ಲಿ ಬಿಸಿಸಿಐನ ಆದಾಯ ಗಣನೀಯವಾಗಿ ಇಳಿದಿರುವ ವಿಚಾರವನ್ನು ಸಭೆಯ ಗಮನಕ್ಕೆ ತರಲಾಯಿತು. ಇದರಿಂದಾಗಿ, ಆಟಗಾರರ ಸಂಭಾವನೆಯೂ ಕಡಿಮೆಯಾಗಿದೆ. ಸಂಸ್ಥೆಯ ಆದಾಯ ಇನ್ನೂ ಇಳಿತ ಕಂಡರೆ, ಆಟಗಾರರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು. ಇದೇ ವೇಳೆ, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿರುವ ಬಿಸಿಸಿಐ ವಿರುದ್ಧದ ಪ್ರಕರಣಗಳಿಗಾಗಿ ಕಳೆದೆರಡು ವರ್ಷಗಳಲ್ಲಿ ರು.52 ಕೋಟಿ ಹಣ ಖರ್ಚಾಗಿರುವುದಾಗಿ ಸಭೆಗೆ ತಿಳಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT