ಬ್ರೆಟ್ ಲೀ 
ಕ್ರೀಡೆ

ಸೌರವ್ ಗಂಗೂಲಿ ಕ್ರಿಕೆಟ್ ಜ್ಞಾನ ಟೀಂ ಇಂಡಿಯಾಗೆ ಸಿಗಲಿ

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ತರಬೇತುದಾರರಾಗಿ ನೇಮಕಗೊಂಡರೆ ಅದು ತಂಡಕ್ಕೆ ಹೆಚ್ಚು ಅನುಕೂಲ ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ತಿಳಿಸಿದ್ದಾರೆ....

ಮೆಲ್ಬರ್ನ್ : ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ತರಬೇತುದಾರರಾಗಿ ನೇಮಕಗೊಂಡರೆ ಅದು ತಂಡಕ್ಕೆ ಹೆಚ್ಚು ಅನುಕೂಲ ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ತಿಳಿಸಿದ್ದಾರೆ, ಕ್ರಿಕೆಟ್ ಬಗ್ಗೆ ಅವರಲ್ಲಿರುವ ಅಪಾರ ಜ್ಞಾನದಿಂದ ಹಾಗೂ ಮಾರ್ಗದರ್ಶನದಿಂದ ಟೀಂ ಇಂಡಿಯಾ ಅತ್ಯುತ್ತಮ ತಂಡವಾಗಿ ಹೊರಹೊಮ್ಮಬಲ್ಲದು ಎಂದು ಅವರು ತಿಳಿಸಿದ್ದಾರೆಂದು ಪತ್ರಿಕೆಯೊಂದು ವರದಿ ಮಾಡಿದೆ.

ಈ ಹಿಂದೆ ಟೀಂ ಇಂಡಿಯಾ ಕೋಚ್ ಆಗಿದ್ದ ಡಂಕನ್ ಪ್ಲೆಚರ್ ಅವರ ಅವಧಿಯು ಇದೇ ವರ್ಷ ನಡೆದಿದ್ದ ವಿಶ್ವಕಪ್ ನೊಂದಿಗೆ ಮುಕ್ತಾಯಗೊಂಡಿದೆ. ಹಾಗಾಗಿ ಸದ್ಯಕ್ಕೆ ಬ್ಲೂ ಬಾಯ್ಸ್ ತಂಡದ ತರಬೇತುದಾರರ ಸ್ಥಾನ ಖಾಲಿ ಇದೆ.ಈ ಸ್ಥಾನಕ್ಕೆ ಗಂಗೂಲಿ ಅವರು ನೇಮಕಗೊಳ್ಳುತ್ತಾರೆ ಎಂಬ ವದಂತಿಗಳು ಕೆಲ ದಿನಗಳ ಹಿಂದೆ ಸುಳಿದಾಡಿದ್ದವು. ಈ ಹಿನ್ನೆಲೆಯಲ್ಲಿ ಬ್ರೆಟ್ ಲೀ ಅವರು ಈ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಕ್ರಿಕೆಟ್ ನ ಮೂರು ಮಾದರಿಗಳಾದ ಏಕದಿನ, ಹಾಗೂ ಟಿ 20 ಪಂದ್ಯಗಳಲ್ಲಿ ಸಾಕಷ್ಟು ಬಾರಿ ಆಡಿ ಅನುಭವ ಹೊಂದಿರುವ ಅವರು ಈ ಹಿಂದೆ ಟೀಂ ಇಂಡಿಯಾ ನಾಯಕನಾಗಿಯೂ ಉತ್ತಮವಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕ್ರಿಕೆಟ್ ನಲ್ಲಿ ಅವರು ಗಳಿಸಿರುವ ಜ್ಞಾನದ ಜೊತೆಗೆ ಅವರು ನಾಯಕರಾಗಿ  ಹಿಂದೊಮ್ಮೆ ತಂಡವನ್ನು ಮುನ್ನಡೆಸಿದ್ದ ಅನುಭವ ಅವರನ್ನು ಮತ್ತಷ್ಟು ಪರಿಪಕ್ವವಾಗಿಸಿದೆ. ಈ ಹಿನ್ನೆಲೆಯಲ್ಲಿ ಗಂಗೂಲಿ ಅವರು ಟೀಂ ಇಂಡಿಯಾ ತರಬೇತುದಾರರಾದರೇ ತಂಡಕ್ಕೆ ಹೆಚ್ಚು ಉಪಯೋಗವಾಗುತ್ತದೆ ಎಂದು ಬ್ರೆಟ್ ಲೀ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT