ಡ್ವೈನ್ ಬ್ರಾವೋ 
ಕ್ರೀಡೆ

ವೆಸ್ಟ್ ಇಂಡೀಸ್ ಆಟಗಾರರನ್ನು ಹೆಚ್ಚು ಟೀಕೆಗೆ ಗುರಿ ಮಾಡಲಾಗಿದೆ:ಡ್ವೈನ್ ಬ್ರಾವೊ

ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚು ಟೀಕೆಗೆ ಗುರಿಯಾಗುತ್ತಿದ್ದಾರೆ ಎಂದು ಡ್ವೈನ್ ಬ್ರಾವೊ ಬೇಸರ ವ್ಯಕ್ತಪಡಿಸಿದ್ದಾರೆ...

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ಡ್ವೈನ್ ಬ್ರಾವೋ, ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚು ಟೀಕೆಗೆ ಗುರಿಯಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ತಮ್ಮ ದೇಶದ ಪರವಾಗಿ ಆಡುವ ಬದಲು, ಆರ್ಥಿಕ ಹಿತಾಸಕ್ತಿಗಾಗಿ ವಿಶ್ವದ ಪ್ರಮುಖ ಟಿ-20 ಟೂರ್ನಿಗಳಲ್ಲಿ ಹೆಚ್ಚು ಭಾಗವಹಿಸುತ್ತಾರೆ ಎಂಬ ಮಾತುಗಳಿಗೆ ಬ್ರಾವೊ ತಮ್ಮ ನಿರಾಸೆ ವ್ಯಕ್ತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. 2010ರಲ್ಲಿ ಬ್ರಾವೊ ಅವರನ್ನು ಕಾರಣ ತಿಳಿಸದೆ ಟೆಸ್ಟ್ ತಂಡದಿಂದ ಕೈ ಬಿಡಲಾಗಿತ್ತು. ಅಲ್ಲದೆ ಆ ಮಾದರಿಗೆ ನಿವೃತ್ತಿ ತೆಗೆದುಕೊಳ್ಳುವಂತೆ ಒತ್ತಡವನ್ನು ಹೇರಲಾಗಿತ್ತು. ಇನ್ನು ಕಳೆದ ವರ್ಷ ತಮ್ಮ ಮಂಡಳಿ ವಿರುದ್ಧ ಬಂಡಾಯವೆದ್ದು ಭಾರತ ಪ್ರವಾಸವನ್ನು ಮೊಟಕುಗೊಳಿಸಿದ ಹಿನ್ನೆಲೆಯಲ್ಲಿ ಬ್ರಾವೊ ತಮ್ಮ ನಾಯಕತ್ವವನ್ನಷ್ಟೇ ಅಲ್ಲ, ಏಕದಿನ ತಂಡದಿಂದಲೂ ಹೊರಗುಳಿದಿದ್ದಾರೆ. ಇತ್ತೀಚೆಗೆ ನಡೆದ ಸಿಯೆಟ್ ಕ್ರಿಕೆಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಟಿ-20 ಕ್ರಿಕೆಟಿಗ ಪ್ರಶಸ್ತಿ ಪಡೆದ ಬ್ರಾವೊ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

ವಿಶ್ವದ ಬೇರೆ ಬೇರೆ ದೇಶದ ಆಟಗಾರರು ಸಹ ಐಪಿಎಲ್ ಸೇರಿದಂತೆ ವಿವಿಧ ಟಿ-20 ಟೂರ್ನಿಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಕೇವಲ ವೆಸ್ಟ್ ಇಂಡೀಸ್ ಆಟಗಾರರನ್ನು ಮಾತ್ರ ಟೀಕೆಗೆ ಗುರಿಪಡಿಸುತ್ತಿರುವುದು ಸಾಕಷ್ಟು ನೋವು ತಂದಿದೆ. ಈ ಪರಿಸ್ಥಿತಿಗಳು ನನ್ನ ನಿಯಂತ್ರಣದಿಂದಾಚೆಗೆ ಇವೆ. ಹಾಗಾಗಿ ಏನು ಮಾಡಲು ಸಾಧ್ಯವಿಲ್ಲ. ಹಾಗಾಗಿ ನಾನು ಆಡುವ ತಂಡದಲ್ಲಿ ಶೇಕಡಾ 100ರಷ್ಟು ಪರಿಶ್ರಮ ಹಾಕಿ ಆಟವನ್ನು ಆನಂದಿಸುತ್ತೇನೆ ಎಂದು ಬ್ರಾವೊ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯ ನಿಯಮಗಳು ಬ್ಯಾಟ್ಸ್ ಮನ್ ಪರವಾಗಿವೆ. ಪಿಚ್ ಮಂದಗತಿಯಾಗಿದೆ. ಮೈದಾನಗಳು ಚಿಕ್ಕದಾಗಿವೆ. ಹೊರ ಅಂಗಣ ವೇಗವಾಗಿದೆ. ಈ ಎಲ್ಲ ಅಂಶಗಳನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಹಾಗೂ ಬ್ಯಾಟ್ಸ್ ಮನ್ ಗಳ ವಿರುದ್ಧ ಮೇಲುಗೈ ಸಾಧಿಸಲು ಇಚ್ಛಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT