ಡ್ವೈನ್ ಬ್ರಾವೋ 
ಕ್ರೀಡೆ

ವೆಸ್ಟ್ ಇಂಡೀಸ್ ಆಟಗಾರರನ್ನು ಹೆಚ್ಚು ಟೀಕೆಗೆ ಗುರಿ ಮಾಡಲಾಗಿದೆ:ಡ್ವೈನ್ ಬ್ರಾವೊ

ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚು ಟೀಕೆಗೆ ಗುರಿಯಾಗುತ್ತಿದ್ದಾರೆ ಎಂದು ಡ್ವೈನ್ ಬ್ರಾವೊ ಬೇಸರ ವ್ಯಕ್ತಪಡಿಸಿದ್ದಾರೆ...

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ಡ್ವೈನ್ ಬ್ರಾವೋ, ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚು ಟೀಕೆಗೆ ಗುರಿಯಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರರು ತಮ್ಮ ದೇಶದ ಪರವಾಗಿ ಆಡುವ ಬದಲು, ಆರ್ಥಿಕ ಹಿತಾಸಕ್ತಿಗಾಗಿ ವಿಶ್ವದ ಪ್ರಮುಖ ಟಿ-20 ಟೂರ್ನಿಗಳಲ್ಲಿ ಹೆಚ್ಚು ಭಾಗವಹಿಸುತ್ತಾರೆ ಎಂಬ ಮಾತುಗಳಿಗೆ ಬ್ರಾವೊ ತಮ್ಮ ನಿರಾಸೆ ವ್ಯಕ್ತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಮತ್ತು ಆಟಗಾರರ ನಡುವೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. 2010ರಲ್ಲಿ ಬ್ರಾವೊ ಅವರನ್ನು ಕಾರಣ ತಿಳಿಸದೆ ಟೆಸ್ಟ್ ತಂಡದಿಂದ ಕೈ ಬಿಡಲಾಗಿತ್ತು. ಅಲ್ಲದೆ ಆ ಮಾದರಿಗೆ ನಿವೃತ್ತಿ ತೆಗೆದುಕೊಳ್ಳುವಂತೆ ಒತ್ತಡವನ್ನು ಹೇರಲಾಗಿತ್ತು. ಇನ್ನು ಕಳೆದ ವರ್ಷ ತಮ್ಮ ಮಂಡಳಿ ವಿರುದ್ಧ ಬಂಡಾಯವೆದ್ದು ಭಾರತ ಪ್ರವಾಸವನ್ನು ಮೊಟಕುಗೊಳಿಸಿದ ಹಿನ್ನೆಲೆಯಲ್ಲಿ ಬ್ರಾವೊ ತಮ್ಮ ನಾಯಕತ್ವವನ್ನಷ್ಟೇ ಅಲ್ಲ, ಏಕದಿನ ತಂಡದಿಂದಲೂ ಹೊರಗುಳಿದಿದ್ದಾರೆ. ಇತ್ತೀಚೆಗೆ ನಡೆದ ಸಿಯೆಟ್ ಕ್ರಿಕೆಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಟಿ-20 ಕ್ರಿಕೆಟಿಗ ಪ್ರಶಸ್ತಿ ಪಡೆದ ಬ್ರಾವೊ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

ವಿಶ್ವದ ಬೇರೆ ಬೇರೆ ದೇಶದ ಆಟಗಾರರು ಸಹ ಐಪಿಎಲ್ ಸೇರಿದಂತೆ ವಿವಿಧ ಟಿ-20 ಟೂರ್ನಿಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಕೇವಲ ವೆಸ್ಟ್ ಇಂಡೀಸ್ ಆಟಗಾರರನ್ನು ಮಾತ್ರ ಟೀಕೆಗೆ ಗುರಿಪಡಿಸುತ್ತಿರುವುದು ಸಾಕಷ್ಟು ನೋವು ತಂದಿದೆ. ಈ ಪರಿಸ್ಥಿತಿಗಳು ನನ್ನ ನಿಯಂತ್ರಣದಿಂದಾಚೆಗೆ ಇವೆ. ಹಾಗಾಗಿ ಏನು ಮಾಡಲು ಸಾಧ್ಯವಿಲ್ಲ. ಹಾಗಾಗಿ ನಾನು ಆಡುವ ತಂಡದಲ್ಲಿ ಶೇಕಡಾ 100ರಷ್ಟು ಪರಿಶ್ರಮ ಹಾಕಿ ಆಟವನ್ನು ಆನಂದಿಸುತ್ತೇನೆ ಎಂದು ಬ್ರಾವೊ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯ ನಿಯಮಗಳು ಬ್ಯಾಟ್ಸ್ ಮನ್ ಪರವಾಗಿವೆ. ಪಿಚ್ ಮಂದಗತಿಯಾಗಿದೆ. ಮೈದಾನಗಳು ಚಿಕ್ಕದಾಗಿವೆ. ಹೊರ ಅಂಗಣ ವೇಗವಾಗಿದೆ. ಈ ಎಲ್ಲ ಅಂಶಗಳನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಹಾಗೂ ಬ್ಯಾಟ್ಸ್ ಮನ್ ಗಳ ವಿರುದ್ಧ ಮೇಲುಗೈ ಸಾಧಿಸಲು ಇಚ್ಛಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT