ಸುಂದರ್ ರಾಮನ್ 
ಕ್ರೀಡೆ

ಐಪಿಎಲ್ ಸಿಇಓ ಹುದ್ದೆಗೆ ಸುಂದರ್ ರಾಮನ್ ರಾಜೀನಾಮೆ

ಐಪಿಎಲ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಂದರ್‌ ರಾಮನ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ...

ನವದೆಹಲಿ:  ಐಪಿಎಲ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಂದರ್‌ ರಾಮನ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸದಾ ವಿವಾದಗಳಿಂದಲೇ ಸುದ್ದಿಯಾಗಿದ್ದ ಕ್ರಿಕೆಟ್‌ ನಿರ್ವಾಹಕ ಸುಂದರ್‌ ರಾಮನ್‌   ರಾಜೀನಾಮೆ ಸಲ್ಲಿಸಿದ್ದು ಬಿಸಿಸಿಐ ಆದನ್ನು ಅಂಗೀಕರಿಸಲಾಗಿದೆ. ನಾಗಪುರದಲ್ಲಿ ಬಿಸಿಸಿಐ ಅಧ್ಯಕ್ಷ ಶಶಾಂಕ್‌ ಮನೋಹರ್‌ ಅವರನ್ನು ಭೇಟಿಯಾಗಿ ರಾಮನ್‌ ರಾಜೀನಾಮೆ ಪತ್ರ ನೀಡಿದ್ದಾರೆ.

2013 ರ ಐಪಿಎಲ್‌ ಹಗರಣ ನಡೆದ ನಂತರವೂ ರಾಮನ್‌ ಅವರನ್ನು ಹುದ್ದೆಯಲ್ಲಿ ಮುಂದುವರಿಸಿದ್ದಕ್ಕಾಗಿ ಈ ಹಿಂದೆ ಶಶಾಂಕ್‌ ಮನೋಹರ್‌  ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

2013 ರ ಐಪಿಎಲ್‌ ಹಗರಣಕ್ಕೆ ಸಂಬಂಧಿಸಿ ರಾಮನ್‌ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಸುಂದರ್ ರಾಮನ್ ಸ್ವ ಇಚ್ಚೆಯಿಂದ ರಾಜೀನಾಮೆ ನೀಡದಿದ್ದರೇ, ಅವರನ್ನು ವಜಾಗೊಳಿಸಲು ಬಿಸಿಸಿಐ ತೀರ್ಮಾನಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT