ಪಾಕಿಸ್ತಾನ ಕ್ರಿಕೆಟ್ ಮಂಡಲಿಯ ಅಧ್ಯಕ್ಷ ಶಹರ್ಯಾರ್ ಖಾನ್ 
ಕ್ರೀಡೆ

ಭಾರತಕ್ಕೆ ಹೋಗಿದ್ದೇಕೆ? ಪಿಸಿಬಿ ಅಧ್ಯಕ್ಷರನ್ನು ಪ್ರಶ್ನಿಸಿದ ಪಾಕಿಸ್ತಾನ ಸರ್ಕಾರ

ಪಾಕಿಸ್ತಾನ ಕ್ರಿಕೆಟ್ ಮಂಡಲಿಯ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಿದ ಎರಡು ವಾರಗಳ ನಂತರ, ಭಾರತಕ್ಕೆ ಪ್ರವಾಸ ಮಾಡಿದ್ದೇಕೆ ಎಂದು ಕೇಳಿ ವರದಿ ಸಲ್ಲಿಸುವಂತೆ ಪಾಕಿಸ್ತಾನ

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ಮಂಡಲಿಯ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಿದ ಎರಡು ವಾರಗಳ ನಂತರ, ಭಾರತಕ್ಕೆ ಪ್ರವಾಸ ಮಾಡಿದ್ದೇಕೆ ಎಂದು ಕೇಳಿ ವರದಿ ಸಲ್ಲಿಸುವಂತೆ ಪಾಕಿಸ್ತಾನ ಕ್ರೀಡಾ ಸಚಿವ ಮಿಯಾನ್ ರಿಯಾಜ್ ಹುಸೇನ್ ಪಿರ್ಜಾದಾ ಆಗ್ರಹಿಸಿದ್ದಾರೆ.

ಪಿಸಿಬಿ ಅಧ್ಯಕ್ಷ ಮುಂಬೈಗೆ ಭೇಟಿ ನೀಡಿದ ವೇಳೆಯಲ್ಲಿ ಶಿವಸೇನೆ ಮುಂಬೈ ಬಿಸಿಸಿಐ ಕಚೇರಿ ಎದುರು ಪ್ರತಿಭಟಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಭಾರತಕ್ಕೆ ಪ್ರವಾಸ ಮಾಡುವುದಕ್ಕೂ ಮುಂಚಿತವಾಗಿ ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಸರ್ಕಾರದ ಅನುಮತಿ ಪಡೆದಿದ್ದರೆ ಎಂದು ಪಿರ್ಜಾದಾ ಕೇಳಿದ್ದಾರೆ ಎಂದು ಡಾನ್ ಅಂತರ್ಜಾಲ ಪತ್ರಿಕೆ ವರದಿ ಮಾಡಿದೆ.

ಶಿವಸೇನೆ ನಡೆಸಿದ ಪ್ರತಿಭಟನೆಯಿಂದ ಅಕ್ಟೋಬರ್ ೧೮ ರಂದು ಮುಂಬೈನಲ್ಲಿ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಮತ್ತು ಶಹರ್ಯಾರ್ ಖಾನ್ ನಡುವೆ ನಡೆಯಬೇಕಿದ್ದ ಸಭೆ ರದ್ದಾಗಿತ್ತು.

ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವ ಕಳೆದ ಎಂಟು ವರ್ಷಗಳಿಂದ ರದ್ದಾಗಿರುವ ಕ್ರಿಕೆಟ್ ಸರಣಿಯ ಬಗ್ಗೆ ಮಾತುಕತೆ ನಡೆಸಲು ಶಹರ್ಯಾರ್ ಖಾನ್ ಭಾರತಕ್ಕೆ ಆಗಮಿಸಿದ್ದರು.

"ವಿವರಣೆಯ ಜೊತೆಗೆ ನಡೆದ ಘಟನೆಗಳ ಬಗ್ಗೆ ಮಾಹಿತಿ ತಿಳಿಸುವಂತೆ ಪಾಕಿಸ್ತಾನ ಸಚಿವಾಲಯ ತಿಳಿಸಿದೆ" ಎಂದು ವರದಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT