ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ನಟಿ ಹೇಜಲ್ ಕೀಚ್ ಅವರ ಕುಟುಂಬ (ಸಂಗ್ರಹ ಚಿತ್ರ) 
ಕ್ರೀಡೆ

ಕ್ರಿಕೆಟಿಗ ಯುವಿ-ನಟಿ ಹೇಜಲ್ ಕೀಚ್ ರಹಸ್ಯ ವಿವಾಹ ನಿಶ್ಚಿತಾರ್ಥ..?

ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಬಾಲಿವುಡ್ ನಟಿ ಹೇಜಲ್ ಕೀಚ್ ನಡುವಿನ ಡೇಟಿಂಗ್ ಕುರಿತಂತೆ ಹಲವು ಊಹಾಪೋಹಗಳ ನಡುವೆಯೇ ವಿದೇಶದಲ್ಲಿ ಇವರಿಬ್ಬರ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮಾಡಿಮುಗಿಸಲಾಗಿದೆ ಎಂದು ಹೇಳಲಾಗುತ್ತಿದೆ...

ನವದೆಹಲಿ: ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಬಾಲಿವುಡ್ ನಟಿ ಹೇಜಲ್ ಕೀಚ್ ನಡುವಿನ ಡೇಟಿಂಗ್ ಕುರಿತಂತೆ ಹಲವು ಊಹಾಪೋಹಗಳ ನಡುವೆಯೇ ವಿದೇಶದಲ್ಲಿ ಇವರಿಬ್ಬರ  ನಿಶ್ಚಿತಾರ್ಥವನ್ನು ರಹಸ್ಯವಾಗಿ ಮಾಡಿಮುಗಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ವಿವಾಹದ ಬಳಿಕ ಕ್ರಿಕೆಟಿಗ ಯುವರಾಜ್ ಸಿಂಗ್ ಇದೀಗ ಎಲ್ಲರ ಕೇಂದ್ರ ಬಿಂದುವಾಗಿದ್ದು, ತಮ್ಮ  ಮದುವೆ ಕುರಿತಂತೆ ಭಾರಿ ಸುದ್ದಿಗೆ ಗ್ರಾಸವಾಗಿದ್ದಾರೆ. ಮೂಲಗಳ ಪ್ರಕಾರ ಯುವರಾಜ್ ಸಿಂಗ್ ಮತ್ತು ನಟಿ ಹೇಜಲ್ ಕೀಚ್ ಅವರು ಇಂಡೋನೇಷ್ಯಾದ ಬಾಲಿಯಲ್ಲಿ ವಿವಾಹ ನಿಶ್ಚಿತಾರ್ಥ  ನೆರವೇರಿಸಿಕೊಂಡಿದ್ದು, ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇನ್ನು ತಮ್ಮ ವಿವಾಹ ಕುರಿತಂತೆ ಮಾಧ್ಯಮಗಳ ವರದಿ ಕುರಿತಂತೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಯುವಿ, ಮಾಧ್ಯಮಗಳು ನನ್ನ ಮದುವೆಯ ಸ್ಥಳ ಮತ್ತು ದಿನಾಂಕವನ್ನು ನಿರ್ಧರಿಸಿಬಿಟ್ಟಿವೆ. ದಿನಾಂಕವನ್ನೂ ನೀವೇ ಗೊತ್ತು ಮಾಡಿ. ಮದುವೆಗೆ ಸಿದ್ಧನಾಗಲು ನನಗೆ ನೆರವಾಗುತ್ತದೆ ಎಂದು ಹೇಳುವ ಮೂಲಕ ವಿಹಾಹ ಕುರಿತ ಊಹಾಪೋಹಗಳಿಗೆ ತೆರೆಎಳೆಯಲು ಈ ಹಿಂದೆ ಪ್ರಯತ್ನಿಸಿದ್ದರು.

ಆದರೆ ಯುವಿ ಮತ್ತು ಹೇಜಲ್ ಕೀಚ್ ನಡುವಿನ ವಿವಾಹದ ಸುದ್ದಿ ಕುರಿತಂತೆ ಈ ಹಿಂದೆಯೇ ಕ್ರಿಕೆಟಿಗ ಹರ್ಭಜನ್ ಸಿಂಗ್ ಸುಳಿವು ಬಿಟ್ಟುಕೊಟ್ಟಿದ್ದರು. ಟ್ವಿಟ್ಟರ್ ಚಾಟಿಂಗ್ ವೇಳೆ "ಭಜ್ಜಿ ಈಗ ನನ್ನ  ಸರದಿ ಬಳಿಕ ಯುವಿಯದ್ದು" ಎಂದು ಹೇಳುವ ಮೂಲಕ ಯುವರಾಜ್ ಸಿಂಗ್ ಮದುವೆ ಕುರಿತ ರಹಸ್ಯವನ್ನು ಬಿಚ್ಚಿಟ್ಟಿದ್ದರು.

ಒಟ್ಟಾರೆ ಭಜ್ಜಿ-ಬಸ್ರಾ ವಿವಾಹದ ಬಳಿಕ ಎಲ್ಲ ಕ್ರೀಡಾ ಪ್ರೇಮಿಗಳ ದೃಷ್ಟಿ ಯುವಿ ಮೇಲೆ ಬಿದ್ದಿದ್ದು, ಯುವಿ ವಿವಾಹ ಸಾಕಷ್ಟು ನಿರೀಕ್ಷೆ ಗರಿಗೆದರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT