ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ನಟಿ ಹೇಜಲ್ ಕೀಚ್ ಅವರ ಕುಟುಂಬ (ಸಂಗ್ರಹ ಚಿತ್ರ) 
ಕ್ರೀಡೆ

ಕ್ರಿಕೆಟಿಗ ಯುವಿ-ನಟಿ ಹೇಜಲ್ ಕೀಚ್ ರಹಸ್ಯ ವಿವಾಹ ನಿಶ್ಚಿತಾರ್ಥ..?

ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಬಾಲಿವುಡ್ ನಟಿ ಹೇಜಲ್ ಕೀಚ್ ನಡುವಿನ ಡೇಟಿಂಗ್ ಕುರಿತಂತೆ ಹಲವು ಊಹಾಪೋಹಗಳ ನಡುವೆಯೇ ವಿದೇಶದಲ್ಲಿ ಇವರಿಬ್ಬರ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮಾಡಿಮುಗಿಸಲಾಗಿದೆ ಎಂದು ಹೇಳಲಾಗುತ್ತಿದೆ...

ನವದೆಹಲಿ: ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ಬಾಲಿವುಡ್ ನಟಿ ಹೇಜಲ್ ಕೀಚ್ ನಡುವಿನ ಡೇಟಿಂಗ್ ಕುರಿತಂತೆ ಹಲವು ಊಹಾಪೋಹಗಳ ನಡುವೆಯೇ ವಿದೇಶದಲ್ಲಿ ಇವರಿಬ್ಬರ  ನಿಶ್ಚಿತಾರ್ಥವನ್ನು ರಹಸ್ಯವಾಗಿ ಮಾಡಿಮುಗಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ವಿವಾಹದ ಬಳಿಕ ಕ್ರಿಕೆಟಿಗ ಯುವರಾಜ್ ಸಿಂಗ್ ಇದೀಗ ಎಲ್ಲರ ಕೇಂದ್ರ ಬಿಂದುವಾಗಿದ್ದು, ತಮ್ಮ  ಮದುವೆ ಕುರಿತಂತೆ ಭಾರಿ ಸುದ್ದಿಗೆ ಗ್ರಾಸವಾಗಿದ್ದಾರೆ. ಮೂಲಗಳ ಪ್ರಕಾರ ಯುವರಾಜ್ ಸಿಂಗ್ ಮತ್ತು ನಟಿ ಹೇಜಲ್ ಕೀಚ್ ಅವರು ಇಂಡೋನೇಷ್ಯಾದ ಬಾಲಿಯಲ್ಲಿ ವಿವಾಹ ನಿಶ್ಚಿತಾರ್ಥ  ನೆರವೇರಿಸಿಕೊಂಡಿದ್ದು, ಶೀಘ್ರದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇನ್ನು ತಮ್ಮ ವಿವಾಹ ಕುರಿತಂತೆ ಮಾಧ್ಯಮಗಳ ವರದಿ ಕುರಿತಂತೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಯುವಿ, ಮಾಧ್ಯಮಗಳು ನನ್ನ ಮದುವೆಯ ಸ್ಥಳ ಮತ್ತು ದಿನಾಂಕವನ್ನು ನಿರ್ಧರಿಸಿಬಿಟ್ಟಿವೆ. ದಿನಾಂಕವನ್ನೂ ನೀವೇ ಗೊತ್ತು ಮಾಡಿ. ಮದುವೆಗೆ ಸಿದ್ಧನಾಗಲು ನನಗೆ ನೆರವಾಗುತ್ತದೆ ಎಂದು ಹೇಳುವ ಮೂಲಕ ವಿಹಾಹ ಕುರಿತ ಊಹಾಪೋಹಗಳಿಗೆ ತೆರೆಎಳೆಯಲು ಈ ಹಿಂದೆ ಪ್ರಯತ್ನಿಸಿದ್ದರು.

ಆದರೆ ಯುವಿ ಮತ್ತು ಹೇಜಲ್ ಕೀಚ್ ನಡುವಿನ ವಿವಾಹದ ಸುದ್ದಿ ಕುರಿತಂತೆ ಈ ಹಿಂದೆಯೇ ಕ್ರಿಕೆಟಿಗ ಹರ್ಭಜನ್ ಸಿಂಗ್ ಸುಳಿವು ಬಿಟ್ಟುಕೊಟ್ಟಿದ್ದರು. ಟ್ವಿಟ್ಟರ್ ಚಾಟಿಂಗ್ ವೇಳೆ "ಭಜ್ಜಿ ಈಗ ನನ್ನ  ಸರದಿ ಬಳಿಕ ಯುವಿಯದ್ದು" ಎಂದು ಹೇಳುವ ಮೂಲಕ ಯುವರಾಜ್ ಸಿಂಗ್ ಮದುವೆ ಕುರಿತ ರಹಸ್ಯವನ್ನು ಬಿಚ್ಚಿಟ್ಟಿದ್ದರು.

ಒಟ್ಟಾರೆ ಭಜ್ಜಿ-ಬಸ್ರಾ ವಿವಾಹದ ಬಳಿಕ ಎಲ್ಲ ಕ್ರೀಡಾ ಪ್ರೇಮಿಗಳ ದೃಷ್ಟಿ ಯುವಿ ಮೇಲೆ ಬಿದ್ದಿದ್ದು, ಯುವಿ ವಿವಾಹ ಸಾಕಷ್ಟು ನಿರೀಕ್ಷೆ ಗರಿಗೆದರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT