ಮಂಜಿತ್ ಚಿಲ್ಲರ್ 
ಕ್ರೀಡೆ

ಜನವರಿಯಲ್ಲಿ ಪ್ರೋ ಕಬಡ್ಡಿ ಲೀಗ್: ಬುಲ್ಸ್ ತೊರೆದ ಚಿಲ್ಲರ್

ದೇಶದಲ್ಲಿ ಕಬಡ್ಡಿ ಕ್ರೀಡೆಯ ಹೊಸ ಅಲೆಯನ್ನೇ ಸೃಷ್ಟಿಸಿದ ಪ್ರೋ ಕಬಡ್ಡಿ ಲೀಗ್ ಟೂರ್ನಿಯ 3ನೇ ಆವೃತ್ತಿ ಯನ್ನು ಮುಂದಿನ ವರ್ಷ ಜನವರಿಯಲ್ಲೇ ನಡೆಸಲು...

ಮುಂಬೈ: ದೇಶದಲ್ಲಿ ಕಬಡ್ಡಿ ಕ್ರೀಡೆಯ ಹೊಸ ಅಲೆಯನ್ನೇ ಸೃಷ್ಟಿಸಿದ ಪ್ರೋ ಕಬಡ್ಡಿ ಲೀಗ್ ಟೂರ್ನಿಯ 3ನೇ ಆವೃತ್ತಿ ಯನ್ನು ಮುಂದಿನ ವರ್ಷ ಜನವರಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಟೂರ್ನಿಯ ಆಯೋಜಕರು ತಿಳಿಸಿದ್ದಾರೆ. 
ಮುಂದಿನ ಆವೃತ್ತಿಯಲ್ಲಿ ಎಂಟು ತಂಡಗಳು ತಮ್ಮ ಆಟಗಾರರನ್ನು ಬದಲಾಯಿಸಿಕೊಂಡಿದ್ದಾರೆ. ಬೆಂಗಳೂರು ಬುಲ್ಸ್ ನಾಯಕ ಹಾಗೂ ಕಳೆದ ಎರಡು ಆವೃತ್ತಿಯಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದ ಮಂಜೀತ್ ಚಿಲ್ಲರ್ ಸೇರಿದಂತೆ ಇತರೆ ಪ್ರಮುಖ ಆಟಗಾರರು, ಈ ಬಾರಿ ಬೇರೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 
ಅಜಯ್ ಠಾಕೂರ್, ರಾಕೇಶ್ ಕುಮಾರ್, ದೀಪಕ್ ಹುಡ್ಡಾ, ಜಸ್ಮೀರ್ ಸಿಂಗ್, ಸುರ್ಜಿತ್ ನರ್ವಾಲ್, ಧರ್ಮರಾಜ್ ಚೆರಲನಾಥನ್, ವಾಸಿಂ ಸಜ್ಜದ್, ರಾಜಗುರು ಸುಬ್ರಮಣಿಯನ್ ಈ ಬಾರಿ ಬೇರೆ ತಂಡದಲ್ಲಿ ಆಡಲಿದ್ದಾರೆ ಎಂದು ಪ್ರೋ ಕಬಡ್ಡಿ ಲೀಗ್ ಆಯೋಜಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಯು ಮುಂಬಾ ತಂಡದ ನಾಯಕ ಅನೂಪ್ ಕುಮಾರ್, ದಬಾಂಗ್ ಡೆಲ್ಲಿಯ ಕಾಶಿಲಿಂಗ್ ಅಡಕೆ ಸೇರಿದಂತೆ ರವೀಂದರ್ ಪಹಲ್, ರಾಹುಲ್ ಚೌಧರಿ, ಸುಖೇಶ್ ಹೆಗಡೆ, ಜಾನ್ ಕುನ್ ಲೀ, ಸಂದೀಪ್ ನರ್ವಾಲ್ ಅದೇ ತಂಡಗಳಲ್ಲಿ ಮುಂದುವರಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

SCROLL FOR NEXT