ಇಂಡೋ ಪಾಕ್ ಕ್ರಿಕೆಟ್ ನಿಶ್ಚಿತ? 
ಕ್ರೀಡೆ

ಇಂಡೋ ಪಾಕ್ ಕ್ರಿಕೆಟ್ ನಿಶ್ಚಿತ?

ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ ಸರಣಿ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಈ ಕುರಿತ ಅಂತಿಮ ನಿರ್ಣಯ ಇದೇ ತಿಂಗಳು 27ರಂದು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.

ನವದೆಹಲಿ: ಭಾರತ-ಪಾಕಿಸ್ತಾನ ನಡುವಣ ಬಹುನಿರೀಕ್ಷಿತ ಕ್ರಿಕೆಟ್ ಸರಣಿಯ ಕುರಿತಂತೆ ಉಭಯ ದೇಶಗಳ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಚರ್ಚೆ ನಡೆಸಿದ್ದು, ಈ ಎರಡು ದೇಶಗಳು ಶ್ರೀಲಂಕಾದಲ್ಲಿ ಸರಣಿ ನಡೆಸಲು ನಿರ್ಧರಿಸಿವೆ ಎನ್ನಲಾಗಿದ್ದು, ಈ ಕುರಿತ ಅಂತಿಮ ನಿರ್ಣಯ ಇದೇ ತಿಂಗಳು 27ರಂದು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.
ಬಿಸಿಸಿಐನ ನೂತನ ಅಧ್ಯಕ್ಷ ಶಶಾಂಕ್ ಮನೋಹರ್ ಮತ್ತು ಪಿಸಿಬಿ ಅಧ್ಯಕ್ಷ  ಶಹರ್ಯಾರ್ ಖಾನ್ ಅವರ ದುಬೈ ಭೇಟಿಯ ಮೂಲ ಉದ್ದೇಶ ಉಭಯ ದೇಶಗಳ ನಡುವೆ ಮೂರು ಏಕದಿನ ಮತ್ತು ಎರಡು ಟಿ೨೦ ಪಂದ್ಯಗಳ ಸರಣಿಯನ್ನು ನಡೆಸುವುದಾಗಿತ್ತು.
ಶಶಾಂಕ್ ಮನೋಹರ್ ಆಹ್ವಾನದ ಮೇರೆಗೆ ಇಂಗ್ಲೆಂಡ್ ಕ್ರಿಟೆಟ್ ಮಂಡಳಿ ಅಧ್ಯಕ್ಷ ಗಿಲ್ಸ್ ಕ್ಲಾರ್ಕ್  ಮತ್ತು ಪಿಸಿಬಿ ಕಾರ್ಯಕಾರಿ ಸಮಿತಿ ಮುಖ್ಯಸ್ಥ ನಜಮ್ ಸೇತಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಯುಎಇನಲ್ಲಿ ಭಾರತ ಆಡುವುದಿಲ್ಲ ಎಂದು ಶಶಾಂಕ್ ಮತ್ತೊಮ್ಮೆ ಪುನರುಚ್ಚರಿಸಿದರೆ, ಪಾಕಿಸ್ತಾನ ಯಾವುದೇ ಕಾರಣಕ್ಕೂ ಭಾರತಕ್ಕೆ ಬರುವುದಿಲ್ಲ ಎಂದು
ಪಟ್ಟು ಹಿಡಿಯಿತು. ಅಂತಿಮವಾಗಿ ದ್ವೀಪರಾಷ್ಟ್ರ ಶ್ರೀಲಂಕಾವನ್ನು ಸರಣಿ ನಡೆಯುವ ತಟಸ್ಥ ತಾಣವಾಗಿಸಲು ಉಭಯ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರೂ ನಿರ್ಧರಿಸಿದರು ಎಂದು ಪಿಟಿಐ ವರದಿ ಮಾಡಿದೆ. ಅಂದಹಾಗೆ ಇಂಡೋ-ಪಾಕ್ ಕ್ರಿಕೆಟ್ ಸರಣಿಯ ಆತಿಥ್ಯ ಹೊತ್ತುಕೊಳ್ಳಲು ಶ್ರೀಲಂಕಾ ಉತ್ಸುಕವಾಗಿದೆ ಎಂದೂ ಗೊತ್ತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT