ಇಂಡೋ ಪಾಕ್ ಕ್ರಿಕೆಟ್ ನಿಶ್ಚಿತ? 
ಕ್ರೀಡೆ

ಇಂಡೋ ಪಾಕ್ ಕ್ರಿಕೆಟ್ ನಿಶ್ಚಿತ?

ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ ಸರಣಿ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಈ ಕುರಿತ ಅಂತಿಮ ನಿರ್ಣಯ ಇದೇ ತಿಂಗಳು 27ರಂದು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.

ನವದೆಹಲಿ: ಭಾರತ-ಪಾಕಿಸ್ತಾನ ನಡುವಣ ಬಹುನಿರೀಕ್ಷಿತ ಕ್ರಿಕೆಟ್ ಸರಣಿಯ ಕುರಿತಂತೆ ಉಭಯ ದೇಶಗಳ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಚರ್ಚೆ ನಡೆಸಿದ್ದು, ಈ ಎರಡು ದೇಶಗಳು ಶ್ರೀಲಂಕಾದಲ್ಲಿ ಸರಣಿ ನಡೆಸಲು ನಿರ್ಧರಿಸಿವೆ ಎನ್ನಲಾಗಿದ್ದು, ಈ ಕುರಿತ ಅಂತಿಮ ನಿರ್ಣಯ ಇದೇ ತಿಂಗಳು 27ರಂದು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.
ಬಿಸಿಸಿಐನ ನೂತನ ಅಧ್ಯಕ್ಷ ಶಶಾಂಕ್ ಮನೋಹರ್ ಮತ್ತು ಪಿಸಿಬಿ ಅಧ್ಯಕ್ಷ  ಶಹರ್ಯಾರ್ ಖಾನ್ ಅವರ ದುಬೈ ಭೇಟಿಯ ಮೂಲ ಉದ್ದೇಶ ಉಭಯ ದೇಶಗಳ ನಡುವೆ ಮೂರು ಏಕದಿನ ಮತ್ತು ಎರಡು ಟಿ೨೦ ಪಂದ್ಯಗಳ ಸರಣಿಯನ್ನು ನಡೆಸುವುದಾಗಿತ್ತು.
ಶಶಾಂಕ್ ಮನೋಹರ್ ಆಹ್ವಾನದ ಮೇರೆಗೆ ಇಂಗ್ಲೆಂಡ್ ಕ್ರಿಟೆಟ್ ಮಂಡಳಿ ಅಧ್ಯಕ್ಷ ಗಿಲ್ಸ್ ಕ್ಲಾರ್ಕ್  ಮತ್ತು ಪಿಸಿಬಿ ಕಾರ್ಯಕಾರಿ ಸಮಿತಿ ಮುಖ್ಯಸ್ಥ ನಜಮ್ ಸೇತಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಯುಎಇನಲ್ಲಿ ಭಾರತ ಆಡುವುದಿಲ್ಲ ಎಂದು ಶಶಾಂಕ್ ಮತ್ತೊಮ್ಮೆ ಪುನರುಚ್ಚರಿಸಿದರೆ, ಪಾಕಿಸ್ತಾನ ಯಾವುದೇ ಕಾರಣಕ್ಕೂ ಭಾರತಕ್ಕೆ ಬರುವುದಿಲ್ಲ ಎಂದು
ಪಟ್ಟು ಹಿಡಿಯಿತು. ಅಂತಿಮವಾಗಿ ದ್ವೀಪರಾಷ್ಟ್ರ ಶ್ರೀಲಂಕಾವನ್ನು ಸರಣಿ ನಡೆಯುವ ತಟಸ್ಥ ತಾಣವಾಗಿಸಲು ಉಭಯ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರೂ ನಿರ್ಧರಿಸಿದರು ಎಂದು ಪಿಟಿಐ ವರದಿ ಮಾಡಿದೆ. ಅಂದಹಾಗೆ ಇಂಡೋ-ಪಾಕ್ ಕ್ರಿಕೆಟ್ ಸರಣಿಯ ಆತಿಥ್ಯ ಹೊತ್ತುಕೊಳ್ಳಲು ಶ್ರೀಲಂಕಾ ಉತ್ಸುಕವಾಗಿದೆ ಎಂದೂ ಗೊತ್ತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT