ಆಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ ಜಯ 
ಕ್ರೀಡೆ

19 ವರ್ಷದವರ ತ್ರಿಕೋನ ಸರಣಿ: ಆಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ ಜಯ

ಯಶಸ್ವಿಯಾದ ಬಾಂಗ್ಲಾದೇಶ ತಂಡ 19 ವರ್ಷದೊಳಗಿನವರ ತ್ರಿಕೋನ ಏಕದಿನ ಸರಣಿಯಲ್ಲಿ ಆಫ್ಘಾನಿಸ್ತಾನ ವಿರುದದ್ಧ ಜಯ ಸಾಧಿಸಿದೆ.

ಕೋಲ್ಕತಾ: ಯಶಸ್ವಿಯಾದ ಬಾಂಗ್ಲಾದೇಶ ತಂಡ 19  ವರ್ಷದೊಳಗಿನವರ ತ್ರಿಕೋನ ಏಕದಿನ ಸರಣಿಯಲ್ಲಿ ಆಫ್ಘಾನಿಸ್ತಾನ ವಿರುದದ್ಧ ಜಯ ಸಾಧಿಸಿದೆ. ಬುಧವಾರ ಜಾಧವ್‍ಪುರ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ 8 ವಿಕೆಟ್‍ಗಳ ಅಂತರದಲ್ಲಿ ಆಫ್ಘಾನಿಸ್ತಾನ  ತಂಡವನ್ನು ಮಣಿಸಿದೆ. ಆ ಮೂಲಕ ಪ್ರಶಸ್ತಿ ಸುತ್ತಿಗೆ  ಪ್ರವೇಶಿಸಿದ್ದು, ಅಂತಿಮ ಸುತ್ತಿನಲ್ಲಿ ಭಾರತ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಆಫ್ಘಾನಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಂತರ 26.2 ಓವರ್ ಗಳಲ್ಲಿ 99 ರನ್ ಗಳಿಗೆ ಆಲೌಟ್ ಆಯಿತು.
ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಬಾಂಗ್ಲಾದೇಶ  24.3 ಓವರ್ ಗಳಲ್ಲಿ  2 ವಿಕೆಟ್ ನಷ್ಟಕ್ಕೆ 101 ರನ್ ದಾಖಲಿಸಿತು. ಬಾಂಗ್ಲಾದೇಶದ ಪರ ನಜ್ಮುಲ್ ಹುಸೇನ್ ಶಾಂಟೊ ಅಜೇಯ 38 ಮತ್ತು ಮೆಹೆದಿ ಹಸನ್ ಮಿರಾಜ್ ಅಜೇಯ 37
ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು .ಆಫ್ಘಾನಿಸ್ತಾನ ಪರ ರೆಹಮಾನ್ ಹಾಗೂ ತಾರೀಕ್ ತಲಾ 1  ವಿಕೆಟ್ ಪಡೆದರು. ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ್ದ ಆಫ್ಘಾನಿಸ್ತಾನ ತಂಡ, ಬಾಂಗ್ಲಾ ಬೌಲರ್ ದಾಳಿಗೆ ತತ್ತರಿಸಿತು. ಕೆಳ ಕ್ರಮಾಂಕದಲ್ಲಿ ತಾರಿಕ್ ಅವರ 27 ರನ್ ತಂಡದ ಪರ ಗರಿಷ್ಠ ಮೊತ್ತವಾಯಿತು. ಉಳಿದಂತೆ ಯಾವುದೇ ಬ್ಯಾಟ್ಸ್ ಮನ್ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಆಫ್ಘಾನಿಸ್ತಾನ ತಂಡ ಅಲ್ಪ ಮೊತ್ತಕ್ಕೆ ಕುಸಿಯಿತು. ಬಾಂಗ್ಲಾದೇಶದ ಪರ ಅಹ್ಮದ್ ಶಾವೊನ್, ಸಯೀದ್ ಸರ್ಕಾರ್ ತಲಾ 3, ಹಸನ್ ರಾಣಾ 2 ಮತ್ತು ಹಸನ್ ಮಿರಾಜ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!