ಸಾಂದರ್ಭಿಕ ಚಿತ್ರ 
ಕ್ರೀಡೆ

ಇಂದಿನಿಂದ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್, ಒಲಿಂಪಿಕ್ಸ್ ನತ್ತ ಭಾರತೀಯರ ಗಮನ

ಯಾವುದೇ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಕಾಣಿಸಿಕೊಳ್ಳದಿದ್ದರೂ, ಇತ್ತೀಚೆಗೆ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಮನೋಜ್ಞ ಪ್ರದರ್ಶನ ನೀಡಿ ವಿಶ್ವಮಟ್ಟದ ....

ಯಾವುದೇ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಕಾಣಿಸಿಕೊಳ್ಳದಿದ್ದರೂ, ಇತ್ತೀಚೆಗೆ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಮನೋಜ್ಞ ಪ್ರದರ್ಶನ ನೀಡಿ ವಿಶ್ವಮಟ್ಟದ ಹಣಾಹಣಿಗೆ ಅರ್ಹತೆ ಪಡೆದುಕೊಂಡ ಭಾರತದ ಆರು ಬಾಕ್ಸರ್‍ಗಳು ಅ. 6ರಿಂದ 18ರವರೆಗೆ ನಡೆಯಲಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಉತ್ಕೃಷ್ಟ ಪ್ರದರ್ಶನ ನೀಡುವ ಕಾತರದಲ್ಲಿದ್ದಾರೆ.

ಆದರೆ, ಈ ಬಾರಿ ಅವರ ಗುರಿ ಕೇವಲ ಪದಕ ಗೆಲ್ಲುವುದಲ್ಲ. ಮುಂದಿನ ವರ್ಷ ಬ್ರೆಜಿಲ್‍ನ ರಿಯೋ ಡಿ ಜನೈರೊದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಪಡೆಯುವ ಹೆಬ್ಬಯಕೆಯೂ ಇದೆ. ಇದೇ ನಿರೀಕ್ಷೆಯಲ್ಲಿಗ ಎಲ್. ದೇವೇಂದ್ರೊ ಸಿಂಗ್ (49 ಕೆಜಿ), ಮದನ್ ಲಾಲ್ (52 ಕೆಜಿ), ಶಿವ ಥಾಪಾ (56ಕೆಜಿ), ಮನೋಜ್ ಕುಮಾರ್ (64 ಕೆಜಿ), ವಿಕಾಸ್ ಕೃಷ್ಣನ್ (75 ಕೆಜಿ) ಹಾಗೂ ಸತೀಶ್ ಕುಮಾರ್ (+91 ಕೆಜಿ) ಅವರು ಇದೀಗ, ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಇರಾದೆಯಲ್ಲಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ, ಭಾರತೀಯ ಬಾಕ್ಸಿಂಗ್ ಸಂಸ್ಥೆ (ಬಿಐ), ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ)ಯಿಂದ ಅಮಾನತುಗೊಂಡಿರುವುದರಿಂದ ಎಲ್ಲಾ ಭಾರತೀಯ ಬಾಕ್ಸರ್‍ಗಳೂ ಎಐಬಿಎ ಲಾಂಛನದಡಿಯಲ್ಲಿ ಈ ಟೂರ್ನಿಗೆ ಕಾಲಿಟ್ಟಿದ್ದಾರೆ. ಆದರಿಲ್ಲಿ, ಅವರ ಒಲಿಂಪಿಕ್ಸ್ ಕನಸು ನನಸಾಗುವುದು ಅಷ್ಟು ಸುಲಭದ ಮಾತಲ್ಲ. ಈ ಟೂರ್ನಿಯಲ್ಲಿ ಒಟ್ಟು 73 ದೇಶಗಳಿಂದ 260 ಬಾಕ್ಸರ್‍ಗಳು ಪಾಲ್ಗೊಳ್ಳುತ್ತಿದ್ದಾರೆ. ಇವರಲ್ಲಿ ಕೇವಲ 23 ಮಂದಿಗಷ್ಟೇ ಒಲಿಂಪಿಕ್ಸ್‍ನಲ್ಲಿ ಪಾಲ್ಗೊಳ್ಳುವ ಅವಕಾಶವಿದೆ. ಅಂದರೆ, ಕೇವಲ ಪದಕ ವಿಜೇತರಷ್ಟೇ ಒಲಿಂಪಿಕ್ಸ್‍ಗೆ ಕಾಲಿಡಲಿದ್ದಾರೆ.

ಅದರಲ್ಲೂ 91 ಹಾಗೂ +91ಕೆಜಿ ವಿಭಾಗಗಳಲ್ಲಿ ಚಿನ್ನ ಗೆದ್ದವರು ಮಾತ್ರ ರಿಯೋ ಡಿ ಜನೈರೊ ಕಡೆ ಮುಖ ಮಾಡಲಿದ್ದಾರೆ. ಹಾಗಾಗಿ, ಭಾರತೀಯರ ಮುಂದಿರುವ ಈ ಕನಸು ಕೊಂಚ ದುಬಾರಿಯೇ ಸರಿ. ಆದರೂ, ಈಗಾಗಲೇ ಹಲವಾರು ಪಂದ್ಯಾವಳಿಗಳಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿರುವ ವಿಕಾಸ್, ಶಿವ, ದೇವೇಂದ್ರೊ ಹಾಗೂ ಮನೋಜ್ ಮೇಲೆ ಹೆಚ್ಚು ಭರವಸೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT