ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ 
ಕ್ರೀಡೆ

ಮನೋಹರ್ ಮನವಿಗೆ ಓಗೊಟ್ಟ ಶ್ರೀನಿವಾಸನ್, ಸ್ವಹಿತಾಸಕ್ತಿ ಸಂಘರ್ಷ ಅರ್ಜಿ ವಾಪಸ್

ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ವಿರುದ್ಧ ಸುಳ್ಳು ಸಾಕ್ಷ್ಯ ಮೊಕದ್ದಮೆಯನ್ನು ಸಲ್ಲಿಸಿದ್ದ ಎನ್. ಶ್ರೀನಿವಾಸನ್, ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಅವರ ಮನವಿಯಂತೆ ....

ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ವಿರುದ್ಧ ಸುಳ್ಳು ಸಾಕ್ಷ್ಯ ಮೊಕದ್ದಮೆಯನ್ನು ಸಲ್ಲಿಸಿದ್ದ ಎನ್. ಶ್ರೀನಿವಾಸನ್, ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಅವರ ಮನವಿಯಂತೆ ಸೋಮವಾರ ಅರ್ಜಿಯನ್ನು ವಾಪಸ್  ಪಡೆದಿದ್ದಾರೆ.

ಭಾನುವಾರ ಬಿಸಿಸಿಐ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಾಂಕ್ ಮನೋಹರ್  ತಮಿಳುನಾಡು ಕ್ರಿಕೆಟ್ ಸಂಸ್ಥೆ ಪ್ರತಿನಿಧಿ ರಾಮನ್ ಅವರ ಮೂಲಕ ಅನುರಾಗ್  ಠಾಕೂರ್ ವಿರುದ್ಧದ ಅರ್ಜಿಯನ್ನು ಹಿಂಪಡೆ ಯುವಂತೆ ಶ್ರೀನಿವಾಸನ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಬಿಸಿಸಿಐನ ಆಂತರಿಕ  ವಿಷಯಗಳನ್ನು ಮಾತಪಕತೆಗಳ ಮೂಲಕ ಚರ್ಚಿಸಿಕೊಳ್ಳಬೇಕೆ ಹೊರತು ಕೋರ್ಟ್ ಆವರಣದಲ್ಲಿ ಅಲ್ಲ ಎಂದು ತಿಳಿಸಿದ್ದರು. ಅದರನ್ವಯ ಶ್ರೀನಿವಾಸನ್ ಸೋಮವಾರವೇ ತಮ್ಮ ಅರ್ಜಿಯನ್ನು ಹಿಂಪಡೆದರು.

ಹಿತಾಸಕ್ತಿ ಸಂಘರ್ಷ ನಿಭಾಯಿಸಲು ಸೂಚನೆ: ಕ್ರಿಕೆಟ್ ಆಡಳಿತಕ್ಕೆ ಸಂಬಂಧಿಸಿದಂತೆ ಶ್ರೀನಿವಾಸನ್ ಅವರ ಹಿತಾಸಕ್ತಿ ಸಂಘರ್ಷದ ವಿಷಯವನ್ನು ನಿಭಾಯಿಸುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ಸೂಚನೆ ನೀಡಿದೆ. ಸೋಮವಾರ ಬಿಸಿಸಿಐನಲ್ಲಿ ಶ್ರೀನಿವಾಸನ್ ಅವರ ಸ್ಥಾನಮಾನ ಕುರಿತಂತೆ ಸ್ಪಷ್ಟನೆ ಕುರಿತ ನಡೆದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಶ್ರೀನಿವಾಸನ್ ಅವರ ಕ್ರಿಕೆಟ್‍ಗೆ ಸಂಬಂಧಿಸಿದ ಹಿತಾಸಕ್ತಿ ಸಂಘರ್ಷ ಇನ್ನೂ ಮುಂದುವರೆದಿದೆಯೇ ಎಂಬುದನ್ನು ಬಿಸಿಸಿಐ ನಿರ್ಧರಿಸಬೇಕು. ಈ ಪ್ರಕರಣವನ್ನು ನಿರಂತರವಾಗಿ ನ್ಯಾಯಾಲಯ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿತು. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ) ತಂಡದ ಷೇರುಗಳನ್ನು ವರ್ಗಾಯಿಸಿದ್ದರೂ, ಶ್ರೀನಿವಾಸನ್ ಅವರ ಹಿತಾಸಕ್ತಿ ಸಂಘರ್ಷ ಮುಂದುವರೆದಿದೆ. ಹಾಗಾಗಿ ಶ್ರೀನಿವಾಸನ್ ಅವರು ಬಿಸಿಸಿಐ ಸಭೆಗಳಲ್ಲಿ ಬಾಗವಹಿಸುವಂತಿಲ್ಲ
ಎಂದು ಬಿಸಿಸಿಐ ಪರ ವಕೀಲರು ವಾದಿಸಿದ್ದಾರೆ.

ನಿಮ್ಮ ನಿರ್ಧಾರಕ್ಕೆ ಬದ್ಧರಾಗಿ: ``ಶ್ರೀನಿವಾಸನ್ ಅವರ ಕುರಿತಂತೆ ನೀವು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದಟಛಿರಾಗಿ. ನಿಮ್ಮ ನಿರ್ಧಾರಕ್ಕಾಗಿ ಪದೇ ಪದೇ ನಮ್ಮ ಒಪ್ಪಿಗೆ ಪಡೆಯಲು ನ್ಯಾಯಾಲಯದ ಮೆಟ್ಟಿಲೇರುವುದು ಸರಿಯಲ್ಲ. ಜನವರಿಯಲ್ಲಿ ನಾವು ಹೇಳಿರುವ ತೀರ್ಪು ಸ್ಪಷ್ಟವಾಗಿದೆ. ಶ್ರೀನಿವಾಸನ್ ಅವರನ್ನು ಅನರ್ಹಗೊಳಿಸುವುದಾದರೆ, ಆ ನಿರ್ಧಾರವನ್ನು ಮುಂದುವರೆಸಿ, ನಿಮ್ಮ ನಿರ್ಧಾರ ಶ್ರೀನಿವಾಸನ್ ಅವರಿಗೆ ಸಮಸ್ಯೆಯಾದರೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ವಿಷಯದಲ್ಲಿ ಇಬ್ಬರಿಗೂ ಹೋರಾಟ ಮಾಡಲು ಸ್ವತಂತ್ರವಿದೆ'' ಎಂದು ಸುಪ್ರೀಂ ಕಟುವಾಗಿ ತಿಳಿಸಿದೆ.

ಜನವರಿಯಲ್ಲಿ ನೀಡಲಾದ 2013ರ ಐಪಿಎಲ್ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಸಿಎಸ್ ಕೆ ಮಾಲೀಕತ್ವ ಹೊಂದಿರುವ ಶ್ರೀನಿನಾಸನ್  ಸ್ವ ಹಿತಾಸಕ್ತಿ ಸಂಘರ್ಷ ಅಂತ್ಯಗೊಳ್ಳುವವರೆಗೂ ಅವರು ಬಿಸಿಸಿಐ ಯಾವುದೇ ಸಭೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT