ಫುಟ್ಬಾಲ್ ಆಟಗಾರ ಪೀಲೆ 
ಕ್ರೀಡೆ

38 ವರ್ಷಗಳ ಬಳಿಕ ಕೋಲ್ಕತಾಗೆ ಪೀಲೆ, ಅಭಿಮಾನಿಗಳಿಂದ ಭವ್ಯ ಸ್ವಾಗತ

ಬ್ರೆಜಿಲ್ ಫುಟ್ಬಾಲ್ ದಂತಕತೆ ಪೀಲೆ ಭಾನುವಾರ ಕೋಲ್ಕತಾಗೆ ಆಗಮಿಸಿದ್ದು, 38 ವರ್ಷಗಳ ಬಳಿಕ ಇಲ್ಲಿಗೆ ಕಾಲಿಟ್ಟಿದ್ದಾರೆ. ಸೋಮವಾರ ಐತಿಹಾಸಿಕ ಈಡನ್....

ಕೊಲ್ಕೋತಾ: ಬ್ರೆಜಿಲ್ ಫುಟ್ಬಾಲ್ ದಂತಕತೆ ಪೀಲೆ ಭಾನುವಾರ ಕೋಲ್ಕತಾಗೆ ಆಗಮಿಸಿದ್ದು, 38 ವರ್ಷಗಳ ಬಳಿಕ ಇಲ್ಲಿಗೆ ಕಾಲಿಟ್ಟಿದ್ದಾರೆ. ಸೋಮವಾರ ಐತಿಹಾಸಿಕ ಈಡನ್ ಗಾರ್ಡನ್‍ನಲ್ಲಿ ನಡೆಯಲಿರುವ ಪ್ರದರ್ಶನ ಪಂದ್ಯದಲ್ಲಿ ಕಣಕ್ಕಿಳಿದು ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಪೀಲೆ ಆಗಮನದ ವೇಳೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಅಭಿಮಾನಿಗಳು
ಜಮಾಯಿಸಿದ್ದು, ಪೀಲೇ ಪೀಲೆ ಎಂದು ಕೂಗುತ್ತಾ ತಮ್ಮ ಅಭಿಮಾನ ತೋರಿದರು.

ಅಲ್ಲದೆ ಭಾರತ ಮಾಜಿ ಫುಟ್ಬಾಲ್ ಆಟಗಾರ ಚುನಿ ಗೋಸ್ವಾಮಿ ಸ್ವಾಗತಿಸಿದರು. ಭಾನುವಾರ ವಿಶ್ರಾಂತಿ ಪಡೆಯಲಿರುವ ಪೀಲೆ, ಸೋಮವಾರ ಮೋಹನ್ ಬಗಾನ್ ವಿರುದ್ಧ ನಡೆಯಲಿರುವ ಪ್ರದರ್ಶನ ಪಂದ್ಯದಲ್ಲಿ ಅಮೆರಿಕಾದ ನ್ಯೂಯಾರ್ಕ್ ಕಾಸ್ಮೋಸ್ ತಂಡ ನಡುವಣ ಪ್ರದರ್ಶನಪಂದ್ಯ ವೀಕ್ಷಿಸಲಿದ್ದಾರೆ.

ಸಂಜೆ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಚರ್ಚಾ ಕಾರ್ಯಕ್ರಮದಲ್ಲಿ ಬಂಗಾಳ ಕ್ರಿಕೆಟ್ ಸಂಸ್ಥೆ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಜತೆ ಭಾಗವಹಿಸಲಿದ್ದಾರೆ. ಈ ವೇಳೆ ವಿಡಿಯೋ ಕಾನ್ಪರೆನ್ಸ್ ಮೂಲಕ ಟೆನಿಸ್ ತಾರೆ ರಾಫೆಲ್ ನಡಾಲ್
ಸೇರಿಕೊಳ್ಳಲಿದ್ದಾರೆ.

ಅಲ್ಲದೆ ಭಾರತದ ಸಂಗೀತ ಲೋಕದ ದಿಗ್ಗಜ ಎ.ಆರ್. ರೆಹಮಾನ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಭಾಗವಹಿಸಲಿದ್ದಾರೆ. ಮಂಗಳವಾರ ಕೋಲ್ಕತಾದಲ್ಲಿ ನಡೆಯಲಿರುವ ಐಎಸ್‍ಎಲ್ ಟೂರ್ನಿಯಲ್ಲಿ ಅಟ್ಲೆಟಿಕೊ ಡಿ ಕೋಲ್ಕತಾ ಮತ್ತು ಕೇರಳ ಬ್ಲಾಸ್ಟರ್ಸ್ ನಡುವಣ ಪಂದ್ಯದಲ್ಲಿ ಪೀಲೆ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT