ಶ್ರೀನಾಥ್ ಅರವಿಂದ್ 
ಕ್ರೀಡೆ

ಕೊನೆಯ ಎರಡು ಏಕದಿನ ಪಂದ್ಯದಲ್ಲಿ ಉಮೇಶ್ ಬದಲು ರಾಜ್ಯದ ಅರವಿಂದ್ ಗೆ ಸ್ಥಾನ

ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ಆಡಲು ಕರ್ನಾಟಕದ ‌ವೇಗಿ ಶ್ರೀನಾಥ್ ಅರವಿಂದ್ ಅವರು ಸ್ಥಾನ ಪಡೆದಿದ್ದಾರೆ...

ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದ್ದು, ಕರ್ನಾಟಕದ ‌ವೇಗಿ ಶ್ರೀನಾಥ್ ಅರವಿಂದ್ ಅವರು ಸ್ಥಾನ ಪಡೆದಿದ್ದಾರೆ.

ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಇಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯ ಬಳಿಕ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಈ ವಿಷಯವನ್ನು ಪ್ರಕಟಿಸಿದರು.ಇದೇ ವೇಳೆ, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಎರಡು ಪಂದ್ಯಗಳಿಗೂ ತಂಡವನ್ನು ಪ್ರಕಟಿಸಲಾಗಿದೆ. ಆದರೆ, ಟೆಸ್ಟ್‌ ತಂಡದಲ್ಲಿ ಯಾವುದೇ ಪ್ರಮುಖ ಬದಲಾವಣೆ ಮಾಡಿಲ್ಲ. ಆಲ್‌ ರೌಂಡರ್‌, 26 ವರ್ಷದ ರವೀಂದ್ರ ಜಡೇಜ ಅವರಿಗೆ 14 ತಿಂಗಳ ಬಳಿಕ ಮತ್ತೆ ಅವಕಾಶ ನೀಡಲಾಗಿದೆ.

ಅರವಿಂದ್‌ಗೆ ಸ್ಥಾನ: ಏಕದಿನ ತಂಡದಲ್ಲಿ ಉಮೇಶ್ ಯಾದವ್ ಅವರ ಬದಲಿಗೆ ಕರ್ನಾಟಕದ ವೇಗಿ ಎಸ್‌.ಅರವಿಂದ್ ಅವರಿಗೆ ಅವಕಾಶ ದೊರೆತಿದೆ.ಕೊನೆಯ ಎರಡು ಏಕದಿನ ಪಂದ್ಯಗಳು ಕ್ರಮವಾಗಿ ಚೆನ್ನೈ ಹಾಗೂ ಮುಂಬೈನಲ್ಲಿ ನಡೆಯಲಿವೆ. ಇನ್ನು, ನವೆಂಬರ್‌ 5ರಿಂದ ಆರಂಭಗೊಳ್ಳಿರುವ ಟೆಸ್ಟ್‌ ಸರಣಿಯ ಪಂದ್ಯಗಳು ಕ್ರಮವಾಗಿ ಮೊಹಾಲಿ, ಬೆಂಗಳೂರು, ನಾಗಪುರ ಹಾಗೂ ದೆಹಲಿಯಲ್ಲಿ ನಡೆಯಲಿವೆ. ಇನ್ನುಳಿದಂತೆ ಭಾರತ ತಂಡದಲ್ಲಿ ಹೆಚ್ಚೇನೂ ಬದಲಾವಣೆಯಿಲ್ಲ.

 ಕರ್ನಾಟಕದಿಂದ ಆಲ್‍ರೌಂಡರ್ ಸ್ಟುವರ್ಟ್ ಬಿನ್ನಿ ಇತ್ತೀಚಿನ ಕಳಪೆ ಪ್ರದರ್ಶನದ ಮಧ್ಯೆಯೂ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಇನ್ನು  ನಾಲ್ಕು ಟೆಸ್ಟ್ ಪಂದ್ಯ ಸರಣಿಗೂ ಮುಂಚಿನ ಒಂದು ಅಭ್ಯಾಸ ಪಂದ್ಯಕ್ಕೂ ತಂಡವನ್ನು ಪ್ರಕಟಿಸಿರುವ ಸಂದೀಪ್ ಪಾಟೀಲ್ ಸಾರಥ್ಯದ ಆಯ್ಕೆ ಸಮಿತಿ, ರಾಜ್ಯದ ಕರುಣ್ ನಾಯರ್‍ಗೆ ಸ್ಥಾನ ಕಲ್ಪಿಸಿದೆ ಅಂದಹಾಗೆ ಐದು ಪಂದ್ಯ ಸರಣಿಯಲ್ಲಿ ಈಗಾಗಲೇ ದ.ಆಫ್ರಿಕಾ 2-1 ಮುನ್ನಡೆ ಸಾಧಿಸಿದ್ದು, ಕೊನೆಯ ಎರಡು ಏಕದಿನ ಪಂದ್ಯಗಳು ಕ್ರಮವಾಗಿ ಚೆನ್ನೈ ಹಾಗೂ ಮುಂಬೈನಲ್ಲಿ ಜರುಗಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT