ಸುರೇಶ್ ರೈನಾ 
ಕ್ರೀಡೆ

ಸರಣಿ ಸೋಲಿನ ಸುಳಿಯಲ್ಲಿ ಟೀಂ ಇಂಡಿಯಾ

ದಕ್ಷಿಣ ಆಫ್ರಿಕಾ ನೀಡಿರುವ 439 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ...

ಮುಂಬೈ: ದಕ್ಷಿಣ ಆಫ್ರಿಕಾ ನೀಡಿರುವ 439 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿದೆ. 
ವಾಂಖಡೇ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆತಿಥೇಯ ಭಾರತದೊಂದಿಗಿನ ಸರಣಿ ನಿರ್ಣಾಯಕ ಪಂದ್ಯದಲ್ಲಿ ಪ್ರಮುಖ 5 ವಿಕೆಟ್ ಗಳನ್ನು ಕಳೆದುಕೊಂಡಿರುವ ಭಾರತ ಹೀನಾಯ ಸೋಲಿನಿಂದ ತಪ್ಪಿಸಿಕೊಳ್ಳಲು ಗೌರವಯುತ ಮೊತ್ತವನ್ನು ದಾಖಲಿಸಬೇಕಿದೆ. ಭಾರತ ಪರ ರೋಹಿತ್ ಶರ್ಮಾ 16, ಶಿಖರ್ ಧವನ್ 60, ವಿರಾಟ್ ಕೊಹ್ಲಿ 7, ಅಂಜಿಕ್ಯಾ ರಹಾನೆ 87 ಹಾಗೂ ಸುರೇಶ್ ರೈನಾ 12 ರನ್ ಗಳಿಸಿ ಪೆವಿಲಿಯನ್ ಸೇರಿದ್ದಾರೆ. 
ಟೀಂ ಇಂಡಿಯಾ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 3 ಹಾಗೂ ಅಕ್ಷರ ಪಟೇಲ್ ಶೂನ್ಯ ಗಳಿಸಿ ಕ್ರಿಸ್ ನಲ್ಲಿದ್ದಾರೆ. 
ದಕ್ಷಿಣ ಆಫ್ರಿಕಾ ಪರ ರಬಾಡಾ 3, ಸ್ಟೈನ್ ಹಾಗೂ ಅಬ್ಬೋಟ್ 1 ವಿಕೆಟ್ ಪಡೆದಿದ್ದಾರೆ.
ಟೀಂ ಇಂಡಿಯಾ ವಿರುದ್ಧದ ಐದನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 438 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದರೊಂದಿಗೆ ಭಾರತ ಸರಣಿ ಗೆಲ್ಲಲು 439 ರನ್ ಗಳ ಬೃಹತ್ ಮೊತ್ತವನ್ನು ಗಳಿಸಬೇಕಿದೆ. 
ಟಾಸ್ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ಪರ ಆರಂಭಿಕ ಆಟಗಾರ ಕ್ಲಿಂಟನ್‌ ಡಿ ಕಾಕ್‌ 109 ರನ್ ಸಿಡಿಸಿ ಔಟಾದರು. ಆಮ್ಲಾ 13 ಎಸೆತಗಳಲ್ಲಿ 23 ರನ್ ಗಳಿಸಿದ್ದಾರೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಎಬಿಡಿ ವಿಲಿಯರ್ಸ್ ಕೇಲವ 61 ಎಸೆತಗಳಲ್ಲಿ 119 ರನ್ ಸಿಡಿಸಿದರು. ಡುಪ್ಲೇಸಿಸ್ ಸಹ ಭರ್ಜರಿ ಬ್ಯಾಟಿಂಗ್ ನೊಂದಿಗೆ 115 ಎಸೆತಗಳಲ್ಲಿ 133 ರನ್ ಸಿಡಿಸಿದರು. ಇದರೊಂದಿಗೆ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT