ಸಾಂದರ್ಭಿಕ ಚಿತ್ರ 
ಕ್ರೀಡೆ

ವೆಂಗ್‍ಸರ್ಕಾರ್‍ಗೆ ವಿವಾದ ಹಸ್ತಾಂತರ

ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕಾಗಿ ಸಿದ್ಧಪಡಿಸಲಾಗಿದ್ದ ಪಿಚ್ ಕುರಿತಂತೆ, ವಾಂಖೆಡೆಕ್ರೀಡಾಂಗಣದ ಕ್ಯುರೇಟರ್...ಸುಧೀರ್ ನಾಯಕ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕಾಗಿ ಸಿದ್ಧಪಡಿಸಲಾಗಿದ್ದ ಪಿಚ್ ಕುರಿತಂತೆ, ವಾಂಖೆಡೆ ಕ್ರೀಡಾಂಗಣದ ಕ್ಯುರೇಟರ್ ಸುಧೀರ್ ನಾಯಕ್ ಹಾಗೂ ಟೀಂ ಇಂಡಿಯಾ ನಿರ್ದೇಶಕ ರವಿಶಾಸ್ತ್ರಿ ನಡುವಿನ ವಿವಾದವನ್ನು ಇತ್ಯರ್ಥಗೊಳಿಸಲು ಮಾಜಿ ಕ್ರಿಕೆಟಿಗ ಅವರಿಗೆ ಜವಾಬ್ದಾರಿ ವಹಿಸಿ, ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಆದೇಶ ಹೊರಡಿಸಿದೆ.

ಪಿಚ್ ಕುರಿತಾಗಿ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರೆಂದು ಸುಧೀರ್ ಇತ್ತೀಚೆಗೆ ಎಂಸಿಎಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಭೆ ಸೇರಿದ್ದ ಎಂಸಿಎ ವ್ಯವಸ್ಥಾಪಕ ಮಂಡಳಿ ಸಭೆಯಲ್ಲಿ ಈ ದೂರಿನ ಬಗ್ಗೆ ಚರ್ಚಿಸಿದ ಸದಸ್ಯರು, ಈ ವಿವಾದ ಇತ್ಯರ್ಥಪಡಿಸುವ ಜವಾಬ್ದಾರಿಯನ್ನು ವೆಂಗ್‍ಸರ್ಕಾರ್ ಹೆಗಲಿಗೆ ವಹಿಸಿದ್ದಾರೆ.

ಬಿಸಿಸಿಐಗೂ ದೂರು:
ತಮ್ಮ ಹಾಗೂ ರವಿಶಾಸ್ತ್ರಿ ನಡುವಿನ ಜಗಳವನ್ನು ಸುಧೀರ್ ನಾಯಕ್, ಬಿಸಿಸಿಐ ಅಂಗಳಕ್ಕೂ ಕೊಂಡೊಯ್ದಿದ್ದಾರೆ. ಶಾಸ್ತ್ರಿ ವಿರುದ್ಧ ಬಿಸಿಸಿಐಗೆ ದೂರು ನೀಡಿರುವ ಅವರು, ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SL Bhyrappa ನಿಧನ: ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಇಲ್ಲಿದೆ ಮಾಹಿತಿ

ಹಿರಿಯ ಸಾಹಿತಿ SL Bhyrappa ನಿಧನ

ಲಡಾಖ್‌ ಬಿಜೆಪಿ ಕಚೇರಿಗೆ ಬೆಂಕಿ; ಹಿಂಸಾಚಾರದ ನಂತರ ಮುಷ್ಕರ ಹಿಂಪಡೆ ಸೋನಮ್ ವಾಂಗ್‌ಚುಕ್

Indian Stock Market: H-1B visa ಶುಲ್ಕ ಏರಿಕೆ, ಸತತ 3ನೇ ದಿನವೂ ಮಾರುಕಟ್ಟೆ ಕುಸಿತ, ಐಟಿ ಷೇರುಗಳ ಮೌಲ್ಯ ಇಳಿಕೆ

ಉತ್ತರಪ್ರದೇಶ: ಯುವತಿಯನ್ನು ಹಿಂಬಾಲಿಸಿ ಹಿಂದಿನಿಂದ ತಬ್ಬಿಕೊಂಡು ಕಿರುಕುಳ; ಆರೋಪಿ ಶಹಬಾಜ್ ಬಂಧನ, Video!

SCROLL FOR NEXT