ಬಾಕ್ಸರ್ ಸತೀಶ್ ಕುಮಾರ್ (ಸಂಗ್ರಹಚಿತ್ರ) 
ಕ್ರೀಡೆ

ನಾಲ್ಕರ ಘಟ್ಟಕ್ಕೆ ಸತೀಶ್ ಕುಮಾರ್

ಭಾರತದ ಬಾಕ್ಸರ್ ಸತೀಶ್ ಕುಮಾರ್ ಉತ್ತಮ ಪ್ರದರ್ಶನ ನೀಡುವ ಮೂಲಕ ಏಷ್ಯನ್ ಚಾಂಪಿಯನ್‍ಶಿಪ್‍ನ ಸೆಮಿಫೆೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ...

ಬ್ಯಾಂಕಾಕ್: ಭಾರತದ ಬಾಕ್ಸರ್ ಸತೀಶ್ ಕುಮಾರ್ ಉತ್ತಮ ಪ್ರದರ್ಶನ ನೀಡುವ ಮೂಲಕ ಏಷ್ಯನ್ ಚಾಂಪಿಯನ್‍ಶಿಪ್‍ನ ಸೆಮಿಫೆೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.

ಇದರೊಂದಿಗೆ ವಿಶ್ವ ಚಾಂಪಿಯನ್‍ಶಿಪ್‍ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಬುಧವಾರ ನಡೆದ ಪುರುಷರ 91+ ಕೆ.ಜಿ ವಿಭಾಗದ ಕ್ವಾರ್ಟರ್ಫೆೈನಲ್ ಪಂದ್ಯದಲ್ಲಿ ಸತೀಶ್ ಕುಮಾರ್, ತಮ್ಮ   ಪ್ರತಿಸ್ಪರ್ಧಿ ತಜಕಿಸ್ತಾನದ ಸಿಯೋವುಶ್ ಜುಖುರೋವ್ ಅವರನ್ನು ಮಣಿಸುವ ಮೂಲಕ ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಹಾಕಿದರು. ಸೆಮಿಫೆೈನಲ್ ತಲುಪುವುದರೊಂದಿಗೆ ಅವರು ಪದಕವನ್ನೂ ಖಚಿತಪಡಿಸಿಕೊಂಡಿದ್ದಾರೆ. ಇನ್ನು 52 ಕೆ.ಜಿ ವಿಭಾಗದಲ್ಲಿ ಮದನ್ ಲಾಲ್ ಹಾಗೂ 81 ಕೆ.ಜಿ ವಿಭಾಗದಲ್ಲಿ ಕುಲ್ದೀಪ್ ಸಿಂಗ್ ತಮ್ಮ ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ  ಅನುಭವಿಸಿದರು.

ಭಾರತೀಯ ಆಟಗಾರನ ಆಕ್ರಮಣಕಾರಿ ಆಟದವನ್ನು ಎದುರಿಸಲಾಗದೇ ಸಿಯೋವುಶ್ ನಿಗದಿಗಿಂತ ಹೆಚ್ಚು ಬಾಗುತ್ತಿದ್ದರಿಂದ ಅಂಪೈರ್ ಗಳು ಎರಡು ಬಾರಿ ಎಚ್ಚರಿಕೆ ನೀಡಿದರು. ಅಂತಿಮವಾಗಿ  ಸತೀಶ್ ಕುಮಾರ್ ಅವರನ್ನು ತಾಂತ್ರಿಕ ಆಧಾರದ ಮೇಲೆ ಜಯಶಾಲಿ ಎಂದು ಘೋಷಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT